ಗುರುವಾಯನಕೆರೆ: 80ನೇ ಸ್ವಾತಂತ್ರ್ಯೋತ್ಸವವನ್ನು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಬಹಳ ಸಂಭ್ರಮದಿಂದ ಆಚರಿಸಲಾಯಿತು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದ ಖ್ಯಾತ ವೈದ್ಯರಾದ ಡಾ. ವೇಣುಗೋಪಾಲ್ ಶರ್ಮಾ ಅವರು ಧ್ವಜಾರೋಹಣ ನೆರವೇರಿಸಿ, ಮಕ್ಕಳಿಗೆ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿದ್ದ ಹಿರಿಯ ಸಾಹಿತಿಗಳಾದ ಪಂಡಿತ್ ರಾಮಕೃಷ್ಣ ಶಾಸ್ತ್ರಿ ಅವರು ಮಾತನಾಡಿ, “ಮಕ್ಕಳಲ್ಲಿ ದೇವರನ್ನು ಕಾಣಬೇಕು. ಇಂತಹ ಮುಗ್ಧ ಮಕ್ಕಳಲ್ಲಿರುವ ಶಿಸ್ತು ಮತ್ತು ಸಂಯಮ ನಿಜಕ್ಕೂ ಮೆಚ್ಚುವಂತಹದ್ದು” ಎಂದು ಹೇಳಿದರು. ಬಳಿಕ ಅವರು ಬಹುಮಾನ ವಿತರಣಾ ಕಾರ್ಯಕ್ರಮವನ್ನು ನೆರವೇರಿಸಿದರು.
ಶಿಕ್ಷಕಿ ಲವೀನಾ ಕಾರ್ಯಕ್ರಮ ನಿರೂಪಿಸಿದರು. ಸಂಯೋಜಕಿ ಲೀನಾ ಫ್ಲೋರಿನ್ ಪಿಂಟೋ ಸ್ವಾಗತಿಸಿದರು. ಚೇತನಾ ವಂದನಾರ್ಪಣೆ ಸಲ್ಲಿಸಿದರು. ಶಿಕ್ಷಕಿಯರಾದ ಗೀತಾ, ಜೋಸ್ಲಿಟ ಲೋಬೊ, ಪೂರ್ಣಿಮಾ, ಪ್ರೇಮಾ, ವಿಲ್ಮಾ ಹಾಗೂ ಶಿಕ್ಷಕೇತರ ಸಿಬ್ಬಂದಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.












