27.7 C
ಪುತ್ತೂರು, ಬೆಳ್ತಂಗಡಿ
August 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಸರಕಾರಿ ಶಾಲೆ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

ಗೇರುಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ಗೇರುಕಟ್ಟೆಯ ಸರಕಾರಿ ಶಾಲೆಯನ್ನು ಒಂದರಿಂದ ಪಿಯುಸಿ ತನಕ ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ ಮಾಡಿದ ಶಾಸಕ ಹರೀಶ್ ಪೂಂಜಾರವರಿಗೆ ಅವರ ಮನೆಯ ಮಿಥಿಲಾ ನಿವಾಸದಲ್ಲಿ ಆ 17ರಂದು ಸನ್ಮಾನಿಸಲಾಯಿತು.

ಈ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಗ್ರಾಮ ಮಟ್ಟದಲ್ಲಿಯೇ ಒದಗಿಸುವ ಉದ್ದೇಶದಿಂದ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳಾಗಿ ಮೇಲ್ದರ್ಜೆಗೇರಿಸಲು ನಿರಂತರ ಪ್ರಯತ್ನ ಮಾಡಲಾಗಿತ್ತು. ಸರ್ಕಾರದ ಈ ಆದೇಶದಿಂದ ವಿದ್ಯಾರ್ಥಿಗಳಿಗೆ ಒಂದೇ ಆವರಣದಲ್ಲಿ ಸಮಗ್ರ ಶಿಕ್ಷಣ ಸೌಲಭ್ಯ ಉತ್ತಮ ಶೈಕ್ಷಣಿಕ ವಾತಾವರಣ ಹಾಗೂ ಭವಿಷ್ಯಕ್ಕೆ ಪೂರಕವಾದ ಅವಕಾಶಗಳು ದೊರೆಯಲಿವೆ. ಇದನ್ನು ಕಾಪಾಡಿಕೊಂಡು ಬರುವ ಜವಾಬ್ದಾರಿ ನಿಮಗೆ ಎಂದು ಶಾಸಕರು ತಿಳಿಸಿದ್ದರು.

ಈ ಸಂದರ್ಭದಲ್ಲಿ ಪಿಯುಸಿ ವಿಭಾಗದ ಎಸ್ ಡಿ ಎಂ ಸಿ ಉಪಾಧ್ಯಕ್ಷ ಬಾಲಕೃಷ್ಣ ಗೌಡ ಬಿರ್ಮೊಟ್ಟು, ಪ್ರಭಾರ ಪ್ರಾಂಶುಪಾಲರಾದ ಭ್ರಮರಾಂಬಿಕೆ, ಸ್ಥಳೀಯರಾದ ಕರುಣಾಕರ ಕೊರಂಜ, ಹರೀಶ್ ಗೌಡ ಸಂಬೋಳ್ಯ, ಲೋಕಿತ್ ಬಲ್ಲಿದಡ್ಡ, ಉದಿತ್ ಕುಮಾರ್ ಬರಾಯ , ಗಣೇಶ್ ಕೆ . ಬಿ. ರೋಡ್, ಪ್ರೌಢಶಾಲೆಯ ಉಪ ಪ್ರಾಂಶುಪಾಲರಾದ ಜ್ಯೋತಿ, ಶಿಕ್ಷಕ ಅಜಿತ್ ಕುಮಾರ್, ದಿನೇಶ್, ರಮ್ಯ, ಪ್ರೌಢ ಶಾಲೆಯ ಎಸ್‌ಡಿ ಎಂಸಿ ಉಪಾಧ್ಯಕ್ಷ ಗೋಪಾಲ್ ಗೌಡ ಮುದ್ದುಂಜ, ಸದಸ್ಯರಾದ ಜ್ಯೋತಿ, ರಾಜೇಶ್, ಪವಿತ್ರ, ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪಶು ಆಸ್ಪತ್ರೆಯಲ್ಲಿ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆ – ಮಾಹಿತಿ ಶಿಬಿರ

Suddi Udaya

ಜಾರಿಗೆಬೈಲಿನಲ್ಲಿ ಕೆ.ಎಮ್.ಜೆ. ವತಿಯಿಂದ “ಪ್ರಜಾ ಭಾರತ” ಸೌಹಾರ್ಧ ಕಾರ್ಯಕ್ರಮ

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಗೆ ಯೂತ್ ಫಾರ್ ಸೇವಾ ಎನ್.ಜಿ ಒ ಸಂಸ್ಥೆಯ ವತಿಯಿಂದ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಅಳವಡಿಕೆ

Suddi Udaya

ಸೆ 29 : ತೋಟತ್ತಾಡಿ 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ

Suddi Udaya

ಸೆ.20-22: ಮಂಗಳೂರು- ಉಡುಪಿಯಲ್ಲಿ ಬಿಗ್ ಬ್ರಾಂಡ್ಸ್ ಎಕ್ಸ್ಪೋ 2024: ಒಂದೇ ಸೂರಿನಡಿಯಲ್ಲಿ 120 ಕ್ಕೂ ಹೆಚ್ಚಿನ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳು

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 69 ಫಲಿತಾಂಶ

Suddi Udaya
error: Content is protected !!