28.7 C
ಪುತ್ತೂರು, ಬೆಳ್ತಂಗಡಿ
August 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಅರಮಲೆಬೆಟ್ಟದಲ್ಲಿ ಶ್ರೀ ಕೊಡಮಣಿತ್ತಾಯ ದೈವದ ಸಂಭ್ರಮದ ಸೋಣದ ಕೋಲ

ಗುರುವಾಯನಕೆರೆ : ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಸಂಭ್ರಮದ ಸೋಣದಕೋಲ ಆ. 17 ರಂದು ವೈಭವದಿಂದ ಜರುಗಿತು.

ಬೆಳಗ್ಗೆ 9 ಗಂಟೆಗೆ ದೈವದ ಭಂಡಾರವನ್ನು ಮೆರವಣಿಗೆ ಮೂಲಕ ಕ್ಷೇತ್ರಕ್ಕೆ ತರಲಾಯಿತು. ನಂತರ ಸಂಕ್ರಮಣ ಪೂಜೆ ನಡೆಯಿತು.
12 ಗಂಟೆಯಿಂದ ದೈವಸ್ಥಾನದಲ್ಲಿ ಶ್ರೀ ಕೊಡಮಣಿತ್ತಾಯ ದೈವದ ಸೋಣಕೋಲ ವೈಭವದಿಂದ ಜರುಗಿತು.

ಕ್ಷೇತ್ರದ ಅನುವಂಶಿಕ ಆಡಳಿತ ಮೋಕ್ತೇಸರಾದ ಸುಖೇಶ್ ಕುಮಾರ್ ಕಡಂಬು, ಸುನೀಶ್ ಕುಮಾರ್ ಕಡಂಬು, ಎಕ್ಸೆಲ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಆನಂದ ಶೆಟ್ಟಿ ವಾತ್ಸಲ್ಯ, ವಿಠಲ ಶೆಟ್ಟಿ, ಚಿತ್ತರಂಜನ್ ಹೆಗ್ಡೆ, ಪ್ರದೀಪ್ ಶೆಟ್ಟಿ, ಪ್ರಕಾಶ್ ಜೈನ್ ಡೇವುಣಿ, ಸೀತಾರಾಮ ಶೆಟ್ಟಿ, ಪ್ರದೀಪ್ ಕುಮಾರ್ ಶೆಟ್ಟಿ, ಪ್ರಶಾಂತ್ ಶೆಟ್ಟಿ, ಪ್ರೇಮ್ ಶೆಟ್ಟಿ, ಸಂತೋಷ್ ಕುಮಾರ್ ಜೈನ್, ವೃಷಭ ಆರಿಗಾ, ಧರಣೇಂದ್ರ ಕೆ.ಜೈನ್ ಹಾಗೂ ತಂತ್ರಿ ವಗ೯ದವರು ಉಪಸ್ಥಿತರಿದ್ದರು.


ಊರ ಹಾಗೂ ಪರವೂರ ಭಕ್ತಾಭಿಮಾನಿಗಳು ಆಗಮಿಸಿ ಶ್ರೀ ಕೊಡಮಣಿತ್ತಾಯ ದೈವದ ಗಂಧ ಪ್ರಸಾದ ಹಾಗೂ ಅನ್ನಪ್ರಸಾದ ಸ್ವೀಕರಿಸಿ ದೈವದ ಅನುಗ್ರಹಕ್ಕೆ ಪಾತ್ರರಾದರು.

Related posts

ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದ್ದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya

ಸುಳ್ಯ ನಗರ ಪಂಚಾಯಿತಿ ಮುಖ್ಯಾಧಿಕಾರಿ ಎಂ.ಎಚ್‌. ಸುಧಾಕರ್ ವರ್ಗಾವಣೆ

Suddi Udaya

ಕೊಯ್ಯೂರು: ಜೀಪು ಮತ್ತು ಸರಕಾರಿ ಬಸ್ ನಡುವೆ ಅಪಘಾತ

Suddi Udaya

ಕಲ್ಮಂಜ: ಅಲೆಕ್ಕಿ ನಿವಾಸಿ ಗೀತಾ ನಿಧನ

Suddi Udaya
error: Content is protected !!