27.7 C
ಪುತ್ತೂರು, ಬೆಳ್ತಂಗಡಿ
August 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಸರಕಾರಿ ಶಾಲೆ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

ಗೇರುಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ಗೇರುಕಟ್ಟೆಯ ಸರಕಾರಿ ಶಾಲೆಯನ್ನು ಒಂದರಿಂದ ಪಿಯುಸಿ ತನಕ ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ ಮಾಡಿದ ಶಾಸಕ ಹರೀಶ್ ಪೂಂಜಾರವರಿಗೆ ಅವರ ಮನೆಯ ಮಿಥಿಲಾ ನಿವಾಸದಲ್ಲಿ ಆ 17ರಂದು ಸನ್ಮಾನಿಸಲಾಯಿತು.

ಈ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಗ್ರಾಮ ಮಟ್ಟದಲ್ಲಿಯೇ ಒದಗಿಸುವ ಉದ್ದೇಶದಿಂದ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳಾಗಿ ಮೇಲ್ದರ್ಜೆಗೇರಿಸಲು ನಿರಂತರ ಪ್ರಯತ್ನ ಮಾಡಲಾಗಿತ್ತು. ಸರ್ಕಾರದ ಈ ಆದೇಶದಿಂದ ವಿದ್ಯಾರ್ಥಿಗಳಿಗೆ ಒಂದೇ ಆವರಣದಲ್ಲಿ ಸಮಗ್ರ ಶಿಕ್ಷಣ ಸೌಲಭ್ಯ ಉತ್ತಮ ಶೈಕ್ಷಣಿಕ ವಾತಾವರಣ ಹಾಗೂ ಭವಿಷ್ಯಕ್ಕೆ ಪೂರಕವಾದ ಅವಕಾಶಗಳು ದೊರೆಯಲಿವೆ. ಇದನ್ನು ಕಾಪಾಡಿಕೊಂಡು ಬರುವ ಜವಾಬ್ದಾರಿ ನಿಮಗೆ ಎಂದು ಶಾಸಕರು ತಿಳಿಸಿದ್ದರು.

ಈ ಸಂದರ್ಭದಲ್ಲಿ ಪಿಯುಸಿ ವಿಭಾಗದ ಎಸ್ ಡಿ ಎಂ ಸಿ ಉಪಾಧ್ಯಕ್ಷ ಬಾಲಕೃಷ್ಣ ಗೌಡ ಬಿರ್ಮೊಟ್ಟು, ಪ್ರಭಾರ ಪ್ರಾಂಶುಪಾಲರಾದ ಭ್ರಮರಾಂಬಿಕೆ, ಸ್ಥಳೀಯರಾದ ಕರುಣಾಕರ ಕೊರಂಜ, ಹರೀಶ್ ಗೌಡ ಸಂಬೋಳ್ಯ, ಲೋಕಿತ್ ಬಲ್ಲಿದಡ್ಡ, ಉದಿತ್ ಕುಮಾರ್ ಬರಾಯ , ಗಣೇಶ್ ಕೆ . ಬಿ. ರೋಡ್, ಪ್ರೌಢಶಾಲೆಯ ಉಪ ಪ್ರಾಂಶುಪಾಲರಾದ ಜ್ಯೋತಿ, ಶಿಕ್ಷಕ ಅಜಿತ್ ಕುಮಾರ್, ದಿನೇಶ್, ರಮ್ಯ, ಪ್ರೌಢ ಶಾಲೆಯ ಎಸ್‌ಡಿ ಎಂಸಿ ಉಪಾಧ್ಯಕ್ಷ ಗೋಪಾಲ್ ಗೌಡ ಮುದ್ದುಂಜ, ಸದಸ್ಯರಾದ ಜ್ಯೋತಿ, ರಾಜೇಶ್, ಪವಿತ್ರ, ಉಪಸ್ಥಿತರಿದ್ದರು.

Related posts

ಎಸ್.ಡಿ.,ಎಂ ಪಿಯು ಕಾಲೇಜಿನಲ್ಲಿ ಲಿಂಗಸೂಕ್ಷ್ಮತೆ ಅರಿವು ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಹಾಗೂ ವೇಣೂರು ಠಾಣೆ ವ್ಯಾಪ್ತಿಯ ಸೂಕ್ಷ ಸ್ಥಳಗಳಲ್ಲಿ ಅರೆಸೇನಾಪಡೆ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಪಥ ಸಂಚಲನ

Suddi Udaya

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭುರವರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿಯಾಗಿ ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ನೇಮಕ

Suddi Udaya

ಕುವೆಟ್ಟು ಬೂತ್ ಸಂಖ್ಯೆ 117 ಮತ್ತು 118 ರ ಮತಗಟ್ಟೆಗೆ ಕ್ಯಾ| ಬ್ರಿಜೇಶ್ ಚೌಟ ಹಾಗೂ ಗಣೇಶ್ ಕಾರ್ಣಿಕ ಭೇಟಿ

Suddi Udaya

ಕೊಯ್ಯೂರು : ಮಲೆಕುಡಿಯರ ಸಂಘ ದ.ಕ. ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನೂತನ ಭಜನಾ ಮಂದಿರ ನಿರ್ಮಾಣದ ಸಮಿತಿ ರಚನೆ

Suddi Udaya
error: Content is protected !!