25.5 C
ಪುತ್ತೂರು, ಬೆಳ್ತಂಗಡಿ
August 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫ್ರೀಡಂ ಹಬ್ಬದಲ್ಲಿ ಪಂಚಮಿ ಮಾರೂರು ನೇತೃತ್ವದಲ್ಲಿ ಯಕ್ಷಗಾನ ಮತ್ತು ಭರತನಾಟ್ಯ ಪ್ರದರ್ಶನ

ಬೆಂಗಳೂರು: ಫ್ರೀಡಂ ಹಬ್ಬದ ಅಂಗವಾಗಿ ನಡೆದ ಫ್ರೀಡಂ ಪರೇಡ್‌ನಲ್ಲಿ ಪಂಚಮಿ ಮಾರೂರು ಅವರ ನೇತೃತ್ವದಲ್ಲಿ ಯಕ್ಷಗಾನ ಪ್ರದರ್ಶನ ನೀಡಿ ತುಳುನಾಡಿನ ಶ್ರೀಮಂತ ಕಲಾ ಪರಂಪರೆಯನ್ನು ಅನಾವರಣಗೊಳಿಸಿತು.

ಅದರಲ್ಲೂ ವಿಶೇಷವಾಗಿ, ನಾಡಿನ ಶಕ್ತಿ ಕೇಂದ್ರವಾದ ವಿಧಾನಸೌಧದ ಮುಂಭಾಗದಲ್ಲಿ ನಿರ್ಮಿಸಲಾಗಿದ್ದ ಭವ್ಯ ವೇದಿಕೆಯಲ್ಲಿ ಯಕ್ಷಗಾನ ಪ್ರದರ್ಶನ ನೀಡಿದ್ದು ತುಳುನಾಡಿನ ಜನತೆಗೆ ಹೆಮ್ಮೆಯ ಕ್ಷಣವಾಯಿತು. ಇದೇ ಭವ್ಯ ವೇದಿಕೆಯಲ್ಲಿ ಪಂಚಮಿ ಮಾರೂರು ಅವರ ಶ್ರೀ ಪರಂಪರಾ ಹೆಜ್ಜೆಗಜ್ಜೆ ವೈ.ಪಿ. ಆರ್ಟ್ ಫೌಂಡೇಶನ್ (ರಿ.), ಬೆಂಗಳೂರು ತಂಡವು ತುಳು ಹಾಡಿಗೆ ಮನಮೋಹಕ ಭರತನಾಟ್ಯ ಪ್ರದರ್ಶನ ನೀಡಿ ಕಾರ್ಯಕ್ರಮದ ಸಾಂಸ್ಕೃತಿಕ ವೈಭವವನ್ನು ಮತ್ತಷ್ಟು ಹೆಚ್ಚಿಸಿತು.

ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಬೃಹತ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಸೇರಿದಂತೆ ಹಲವು ಗಣ್ಯರು ಹಾಗೂ ಅಪಾರ ಸಂಖ್ಯೆಯ ಪ್ರೇಕ್ಷಕರ ಸಮ್ಮುಖದಲ್ಲಿ ಈ ಕಲಾ ಪ್ರದರ್ಶನಗಳು ನಡೆದವು. ನಾಡಿನ ಗಣ್ಯರ ಮುಂದೆ ತುಳುನಾಡಿನ ಯಕ್ಷಗಾನ ಕಲೆಯನ್ನು ಹೆಮ್ಮೆಯಿಂದ ಪ್ರಸ್ತುತಪಡಿಸಿದ ಪಂಚಮಿ ಮಾರೂರು ಮತ್ತು ತಂಡದ ಸಾಧನೆ ವಿಶೇಷ ಮೆಚ್ಚುಗೆಗೆ ಪಾತ್ರವಾಯಿತು.

ವಿಧಾನಸೌಧದ ಮುಂಭಾಗದ ಭವ್ಯ ವೇದಿಕೆಯಲ್ಲಿ ಒಂದೆಡೆ ತುಳುನಾಡಿನ ಹೆಮ್ಮೆಯ ಯಕ್ಷಗಾನ, ಮತ್ತೊಂದೆಡೆ ಭಾರತೀಯ ಶಾಸ್ತ್ರೀಯ ನೃತ್ಯ ಪರಂಪರೆಯ ಭರತನಾಟ್ಯ ಪ್ರದರ್ಶನಗೊಂಡಿದ್ದು ಕಲಾಭಿಮಾನಿಗಳಿಗೆ ಮತ್ತಷ್ಟು ಸಂತಸ ತಂದಿತು. ಪಂಚಮಿ ಮಾರೂರು ಅವರ ನೇತೃತ್ವದಲ್ಲಿ ಎರಡೂ ಕಲಾ ಪ್ರಕಾರಗಳು ಪ್ರತಿಷ್ಠಿತ ವೇದಿಕೆಯಲ್ಲಿ ಪ್ರದರ್ಶನಗೊಂಡಿರುವುದು ತುಳುನಾಡಿನ ಪಾಲಿಗೆ ಹೆಮ್ಮೆಯ ಸಂಗತಿಯಾಗಿದೆ.

ಈ ಪ್ರತಿಷ್ಠಿತ ಅವಕಾಶವನ್ನು ಕಲಾವಿದರಿಗೆ ಒದಗಿಸಿ, ತುಳುನಾಡಿನ ಕಲೆ ಮತ್ತು ಸಂಸ್ಕೃತಿಯನ್ನು ರಾಜ್ಯಮಟ್ಟದ ಭವ್ಯ ವೇದಿಕೆಯಲ್ಲಿ ಪರಿಚಯಿಸಲು ಸಹಕರಿಸಿದ ಜೈ ತುಳುನಾಡು ಬೆಂಗಳೂರು (ರಿ.) ತಂಡ, ನಿಧೀಶ್ ಶೆಟ್ಟಿ ಹಾಗೂ ಯತೀಶ್ ಎಂ. – (ಡಿಜಿಟಲ್ ಪಿ.ಆರ್.ಓ.) ಅವರಿಗೆ ಹೃದಯಪೂರ್ವಕ ಅಭಿನಂದನೆಗಳು ಹಾಗೂ ಕೃತಜ್ಞತೆಗಳು.

ತುಳುನಾಡಿನ ಕಲೆ, ಸಂಸ್ಕೃತಿ ಮತ್ತು ಯಕ್ಷಗಾನದ ಹಿರಿಮೆಯನ್ನು ರಾಜ್ಯದ ರಾಜಧಾನಿಯಲ್ಲಿ ಎತ್ತಿಹಿಡಿದ ತುಳುನಾಡಿನ ಹೆಮ್ಮೆಯ ಮಗಳು ಪಂಚಮಿ ಮಾರೂರು ಅವರಿಗೆ ತುಳುನಾಡಿನ ಸಮಸ್ತ ಜನತೆಯ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು ಹಾಗೂ ಶುಭಾಶಯಗಳು.

Related posts

ಅಳದಂಗಡಿ: ಆಮಂತ್ರಣ ಉಯ್ಯಾಲೆ ಸೇವಾ ವಿಭಾಗದ ಉದ್ಘಾಟನೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ಗರಿ

Suddi Udaya

ರಾಜ್ಯ”ಮಿನಿ ಒಲಿಂಪಿಕ್“: ಶಿಶಿರ್ ಜಯವಿಕ್ರಮ್ ನಾಯಕತ್ವದ ದ.ಕ. ವಾಲಿಬಾಲ್ ತಂಡ ಪ್ರಥಮ ಸ್ಥಾನ

Suddi Udaya

ಓಡಿಲ್ನಾಳ: ಶ್ರೀ ಕ್ಷೇತ್ರ ನಾಗಚಾವಡಿಗೆ ಭಕ್ತರಿಂದ ಹರಿದು ಬಂದ ಹಸಿರುವಾಣಿ ಹೊರೆಕಾಣಿಕೆ; ವೈಭವದ ಮೆರವಣಿಗೆ, ಮೆರಗು ತಂದ ಕುಣಿತ ಭಜನೆ

Suddi Udaya

ಬಾರ್ಯ: ಅಕ್ರಮ ಗೋ ಮಾಂಸ ಮಾರಾಟ: ಪ್ರಕರಣ ದಾಖಲು

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಉಜಿರೆ ಸರ್ಕಲ್ ವತಿಯಿಂದ “ಸ್ವಾತಂತ್ರ್ಯ ಸಂಗಮ” ಕಾರ್ಯಕ್ರಮ

Suddi Udaya
error: Content is protected !!