27.7 C
ಪುತ್ತೂರು, ಬೆಳ್ತಂಗಡಿ
August 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಯನ್ಸ್ ಬೆಳ್ತಂಗಡಿ ವತಿಯಿಂದ “ಡ್ರಗ್ಸ್ ಮುಕ್ತ ಬೆಳ್ತಂಗಡಿ” ಅಭಿಯಾನದ ಕರಪತ್ರ ಅನಾವರಣ

ಬೆಳ್ತಂಗಡಿ: ನಾವೆಲ್ಲರೂ ನಮ್ಮ ವೃತ್ತಿ ಬದುಕಿನಲ್ಲಿ ಕರ್ತವ್ಯದ ಪ್ರಜ್ಞೆಯೊಂದಿಗೆ ಉತ್ತಮ ನಾಗರಿಕ ಪ್ರಜ್ಞೆ ಕೂಡ ಬಹುಮುಖ್ಯವಾಗಿದೆ ಎಂದು ಬೆಳ್ತಂಗಡಿ ಗ್ರಾಮಾಂತರ ಸರ್ಕಲ್ ಇನ್ಸ್‌ಪೆಕ್ಟರ್ ರವಿ ಬಿ.ಎಸ್ ಹೇಳಿದರು.

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಸ್ವಸ್ಥ ಸಮಾಜದ ಪರಿಕಲ್ಪಮೆಯೊಂದಿಗೆ “ಡ್ರಗ್ಸ್ ಮುಕ್ತ ಬೆಳ್ತಂಗಡಿ” ಅಭಿಯಾನದ ಕರಪತ್ರ ಅನಾವರಣಗೊಳಿಸಿ ಅವರು ಮಾತನಾಡಿದರು.

ಜೀವ ವಿಕಾಸವಾದಕ್ಕೆ ಹಿಂದಕ್ಕೆ ಹೋದಾಗ ಕಾಡಿನಲ್ಲಿ ವಾಸಮಾಡುತ್ತಿದ್ದ ಮನುಷ್ಯ ತನ್ನ ಚಾಕಚಕ್ಯತೆಯಿಂದ ಸಂಘಟಿತ ಬದುಕು ಆರಂಭಿಸಿದ್ದರಿಂದ ಸಮಾಜ ಸೃಷ್ಟಿಯಾಯಿತು.
ಪರಸ್ಪರ ಭಾವನೆ ಅರ್ಥ ಮಾಡಿಕೊಂಡು ಬೆಳೆಯುವಾಗ ಸ್ನೇಹ ಪ್ರೀತಿ ನಡುವೆ ಅಸಹನೆ ದ್ವೇಷ ಆರಂಭವಾಯಿತು. ಈ ವೇಳೆ ಅಪರಾಧಗಳೂ ಕೂಡ ಸಂಭವಿಸುತ್ತದೆ. ಅವುಗಳ ನಿಯಂತ್ರಣ ಮತ್ತು ಜಾಗೃತಿಗಾಗಿ ಸೇವಾ ತುಡಿತವುಳ್ಳ ಲಯನ್ಸ್ ನಂತಹಾ ಸಂಸ್ಥೆಗಳು ಹುಟ್ಟಿಕೊಂಡಿತು. ತರುಣ ಭಾರತದಲ್ಲಿ ದೇಶದ ಶಕ್ತಿ ಯುವಜನತೆ. ಈ ಯುವ ಜನತೆ ವ್ಯಸನಮುಕ್ತಗೊಂಡರೆ
ಸೂಪರ್ ಪವರ್ ದೇಶ ಸಾಧ್ಯ. ಸಮಾಜದ ಉಳಿವಿಗೆ ಪ್ರತಿ ನಿತ್ಯ ಹೋರಾಟ. ಸಮಾಜ ಶುದ್ದೀಕರಣ ಆಗುತ್ತದೆ. ಪೊಲೀಸರು ಮಾತ್ರವಲ್ಲ, ಸಮಾಜ ಜೊತೆಗಿದ್ದರೆ ಸಾಧ್ಯ ಎಂದವರು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಲಯನ್ಸ್ ಕ್ಲಬ್ ಅಧ್ಯಕ್ಷ ರಘುರಾಮ ಶೆಟ್ಟಿ ಮಾತನಾಡಿ, ಕಯನ್ಸ್‌ನ ಈ ವರ್ಷದ ಧ್ಯೇಯವೇ ಸ್ವಸ್ಥ ಸಮಾಜ ಎಂದರು.

ವೇದಿಕೆಯಲ್ಲಿ ಲಿಯೋ ಕ್ಲಬ್ ಅಧ್ಯಕ್ಷೆ ಅಭೀಜ್ಞಾ ಬೊಳ್ಮ, ಕೋಶಾಧಿಕಾರಿ ನಾಣ್ಯಪ್ಪ ನಾಯ್ಕ್ ಉಪಸ್ಥಿತರಿದ್ದರು.
ರಾಷ್ಟ್ರಪತಿ ಪದಕ ಮಾನ್ಯತೆ ಪಡೆದಿರುವ ಇನ್ಸ್‌ಪೆಕ್ಟರ್ ರವಿ ಬಿ.ಎಸ್ ಅವರನ್ನು ಹಾಗೂ ಕಾರ್ಗಿಲ್ ದಿನಾಚರಣೆಯ ಪ್ರಯುಕ್ತ ಮಾಜಿ ಯೋಧರಾದ ಗೋಪಾಲಕೃಷ್ಣ ಭಟ್ ಕಾಂಚೋಡು ಮತ್ತು ತಂಗಚ್ಚನ್ ಅವರನ್ನು ಸನ್ಮಾನಿಸಲಾಯಿತು.
ಬಂಗಾಡಿ ಶಾಲಾ ಸ್ಕೌಟ್ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.

ಅಶ್ರಫ್ ಆಲಿಕುಂಞಿ ಮುಂಡಾಜೆ ದ್ವಜವಂದನೆ ನಡೆಸಿದರು. ಕಾರ್ಯಕ್ರಮ ಸಂಯೋಜಕ ಧರಣೇಂದ್ರ ಕೆ ಜೈನ್ ವೇದಿಕೆಗೆ ಆಹ್ವಾನಿಸಿದರು. ವಸಂತ ಶೆಟ್ಟಿ ಅತಿಥಿ ಪರಿಚಯ ಮಾಡಿದರು. ಕಾರ್ಯದರ್ಶಿ ಅಮಿತಾನಂದ ಹೆಗ್ಡೆ ವಂದಿಸಿದರು.

Related posts

ರಾತ್ರಿ 11 ಗಂಟೆಗೆ ಬೆಂಗಳೂರಿನಿಂದ ಹುಟ್ಟೂರಿನತ್ತ ವಸಂತ ಬಂಗೇರ ಮೃತದೇಹ; ನಾಳೆ ಬೆಳಗ್ಗೆ 4 ಗಂಟೆಗೆ ಬೆಳ್ತಂಗಡಿ ನಿವಾಸಕ್ಕೆ ಪಾರ್ಥೀವ ಶರೀರ ಆಗಮನ

Suddi Udaya

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ

Suddi Udaya

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಎಸ್. ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಡಿ.ಶ್ರೇಯಸ್ ಕುಮಾರ್ ಭೇಟಿ

Suddi Udaya

ಫೋಟೊಗ್ರಾಫಿ ಸ್ಫರ್ಧೆ: ಡಾ. ಚಂದ್ರಹಾಸ್ ಚಾರ್ಮಾಡಿ ಪ್ರಥಮ

Suddi Udaya

ಆ.15: ನಾಲ್ಕೂರು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿಯಿಂದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

Suddi Udaya
error: Content is protected !!