27.7 C
ಪುತ್ತೂರು, ಬೆಳ್ತಂಗಡಿ
August 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಕ್ಸೆಲ್ ಟೆಕ್ನೊ ಸ್ಕೂಲ್ ನ ಪೂರ್ವ ಪ್ರಾಥಮಿಕ ವಿಭಾಗದಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಛದ್ಮವೇಷ ಸ್ಪರ್ಧೆ

ಗುರುವಾಯನಕೆರೆ: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಎಕ್ಸೆಲ್ ಟೆಕ್ನೋ ಸ್ಕೂಲ್‌ನ ಪೂರ್ವ ಪ್ರಾಥಮಿಕ ವಿಭಾಗದ ಪುಟಾಣಿಗಳಿಗಾಗಿ ಛದ್ಮವೇಷ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.


ಪುಟಾಣಿಗಳು ದೇಶಭಕ್ತಿಯ ಸಂದೇಶ ಸಾರುವ ವಿವಿಧ ವೇಷಭೂಷಣಗಳನ್ನು ಧರಿಸಿ, ಸ್ವಾತಂತ್ರ್ಯ ಹೋರಾಟಗಾರರ ಪಾತ್ರಗಳನ್ನು ಸುಂದರವಾಗಿ ಅಭಿನಯಿಸಿ ಎಲ್ಲರ ಮನಸೂರೆಗೊಂಡರು. ಪುಟ್ಟ ಮಕ್ಕಳ ವೇಷಭೂಷಣ, ಆತ್ಮವಿಶ್ವಾಸ ಮತ್ತು ದೇಶಪ್ರೇಮದ ಅಭಿವ್ಯಕ್ತಿ, ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು.

ಎಕ್ಸೆಲ್ ಟೆಕ್ನೊ ಸ್ಕೂಲ್ ನ ಪೂರ್ವ ಪ್ರಾಥಮಿಕ ಪೋಷಕರಿಗಾಗಿ ಕ್ರಿಯೇಟಿವ್ ಕ್ರಾಫ್ಟ್ ಸ್ಪರ್ಧೆ:
ಸ್ವಾತಂತ್ರ್ಯೋತ್ಸವದ ಅಂಗವಾಗಿ ಎಕ್ಸೆಲ್ ಟೆಕ್ನೋ ಸ್ಕೂಲ್‌ನ ಪೂರ್ವ ಪ್ರಾಥಮಿಕ ವಿಭಾಗದ ಮಕ್ಕಳ ಪೋಷಕರಿಗಾಗಿ ಕ್ರಿಯೇಟಿವ್ ಕ್ರಾಫ್ಟ್ ಸ್ಪರ್ಧೆಯನ್ನೂ ಆಯೋಜಿಸಲಾಗಿತ್ತು.
ಪೋಷಕರು ತಮ್ಮ ಕಲ್ಪನೆ, ಕೌಶಲ್ಯ ಮತ್ತು ಸೃಜನಶೀಲತೆಯನ್ನು ಬಳಸಿಕೊಂಡು ತಯಾರಿಸಿದ ವೈವಿಧ್ಯಮಯ ಕಲಾಕೃತಿಗಳು ಎಲ್ಲರ ಗಮನ ಸೆಳೆದವು. ಪ್ರತಿಯೊಂದು ಕಲಾಕೃತಿಯಲ್ಲೂ ಅವರ ಸೃಜನಾತ್ಮಕತೆ, ಆಸಕ್ತಿ, ಪ್ರತಿಭೆ ಹಾಗೂ ಶಾಲೆಯ ಕಾರ್ಯಕ್ರಮಗಳಿಗೆ ನೀಡಿದ ಸ್ಪಂದನೆ ಸ್ಪಷ್ಟವಾಗಿ ಪ್ರತಿಬಿಂಬಿಸಿತು.


ಈ‌ ಸಂದರ್ಭದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬಾಂಜಾರು ಮಲೆ ಶ್ರೀ ಮಹಾಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಬಗ್ಗೆ ಸಾರ್ವಜನಿಕ ಸಮಾಲೋಚನಾ ಸಭೆ

Suddi Udaya

ಧರ್ಮಸ್ಥಳದಲ್ಲಿ ಎರಡು ಆಟೋ ಹಾಗೂ ಮೂರು ಕಾರುಗಳ ನಡುವೆ ಸರಣಿ ಅಪಘಾತ

Suddi Udaya

ಬೆನಕ ಆಸ್ಪತ್ರೆಯಲ್ಲಿ ‘ಡಿ ‘ಲೆವೆಲ್‌ ಐಸಿಯು ಸೌಲಭ್ಯ ಮತ್ತು ಸಂಪೂರ್ಣ ಶೈತ್ಯಾಗಾರವಿರುವ ಆಂಬುಲೆನ್ಸ್‌ ಲೋಕಾರ್ಪಣೆ

Suddi Udaya

ಸುಲ್ಕೇರಿ ಶ್ರೀ ರಾಮ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ಉದ್ಘಾಟನೆ

Suddi Udaya

ಕಣಿಯೂರು ಗ್ರಾ.ಪಂ. ಮಾಜಿ ಉಪಾಧ್ಯಕ್ಷೆ ಸರಸ್ವತಿ ಹೃದಯಾಘಾತದಿಂದ ನಿಧನ

Suddi Udaya

ತಿರುಮಲೇಶ್ವರ ಭಟ್ಟರಿಗೆ ರಾಷ್ಟ್ರಮಟ್ಟದ ಕ್ರೀಡಾಕೂಟ ಪ್ರಶಸ್ತಿ

Suddi Udaya
error: Content is protected !!