27.7 C
ಪುತ್ತೂರು, ಬೆಳ್ತಂಗಡಿ
August 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಸರಕಾರಿ ಶಾಲೆ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

ಗೇರುಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ಗೇರುಕಟ್ಟೆಯ ಸರಕಾರಿ ಶಾಲೆಯನ್ನು ಒಂದರಿಂದ ಪಿಯುಸಿ ತನಕ ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ ಮಾಡಿದ ಶಾಸಕ ಹರೀಶ್ ಪೂಂಜಾರವರಿಗೆ ಅವರ ಮನೆಯ ಮಿಥಿಲಾ ನಿವಾಸದಲ್ಲಿ ಆ 17ರಂದು ಸನ್ಮಾನಿಸಲಾಯಿತು.

ಈ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಗ್ರಾಮ ಮಟ್ಟದಲ್ಲಿಯೇ ಒದಗಿಸುವ ಉದ್ದೇಶದಿಂದ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳಾಗಿ ಮೇಲ್ದರ್ಜೆಗೇರಿಸಲು ನಿರಂತರ ಪ್ರಯತ್ನ ಮಾಡಲಾಗಿತ್ತು. ಸರ್ಕಾರದ ಈ ಆದೇಶದಿಂದ ವಿದ್ಯಾರ್ಥಿಗಳಿಗೆ ಒಂದೇ ಆವರಣದಲ್ಲಿ ಸಮಗ್ರ ಶಿಕ್ಷಣ ಸೌಲಭ್ಯ ಉತ್ತಮ ಶೈಕ್ಷಣಿಕ ವಾತಾವರಣ ಹಾಗೂ ಭವಿಷ್ಯಕ್ಕೆ ಪೂರಕವಾದ ಅವಕಾಶಗಳು ದೊರೆಯಲಿವೆ. ಇದನ್ನು ಕಾಪಾಡಿಕೊಂಡು ಬರುವ ಜವಾಬ್ದಾರಿ ನಿಮಗೆ ಎಂದು ಶಾಸಕರು ತಿಳಿಸಿದ್ದರು.

ಈ ಸಂದರ್ಭದಲ್ಲಿ ಪಿಯುಸಿ ವಿಭಾಗದ ಎಸ್ ಡಿ ಎಂ ಸಿ ಉಪಾಧ್ಯಕ್ಷ ಬಾಲಕೃಷ್ಣ ಗೌಡ ಬಿರ್ಮೊಟ್ಟು, ಪ್ರಭಾರ ಪ್ರಾಂಶುಪಾಲರಾದ ಭ್ರಮರಾಂಬಿಕೆ, ಸ್ಥಳೀಯರಾದ ಕರುಣಾಕರ ಕೊರಂಜ, ಹರೀಶ್ ಗೌಡ ಸಂಬೋಳ್ಯ, ಲೋಕಿತ್ ಬಲ್ಲಿದಡ್ಡ, ಉದಿತ್ ಕುಮಾರ್ ಬರಾಯ , ಗಣೇಶ್ ಕೆ . ಬಿ. ರೋಡ್, ಪ್ರೌಢಶಾಲೆಯ ಉಪ ಪ್ರಾಂಶುಪಾಲರಾದ ಜ್ಯೋತಿ, ಶಿಕ್ಷಕ ಅಜಿತ್ ಕುಮಾರ್, ದಿನೇಶ್, ರಮ್ಯ, ಪ್ರೌಢ ಶಾಲೆಯ ಎಸ್‌ಡಿ ಎಂಸಿ ಉಪಾಧ್ಯಕ್ಷ ಗೋಪಾಲ್ ಗೌಡ ಮುದ್ದುಂಜ, ಸದಸ್ಯರಾದ ಜ್ಯೋತಿ, ರಾಜೇಶ್, ಪವಿತ್ರ, ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಿಂತನಾ ದಿನಾಚರಣೆ

Suddi Udaya

ಬೆಳ್ತಂಗಡಿ : ಮುಖ್ಯ ಪುಸ್ತಕ ಬರಹಗಾರರಿಗೆ ಪುಸ್ತಕ ನಿರ್ವಹಣೆ ಮತ್ತು ಜವಾಬ್ದಾರಿಗಳ ಕುರಿತು ತರಬೇತಿ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಶ್ರೀ ದೇವರ ಪ್ರತಿಷ್ಠೆ

Suddi Udaya

ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆ

Suddi Udaya

ಬೆಳ್ತಂಗಡಿ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿ ಹಾಗೂ ಕ್ಷೇತ್ರ ಸಮಿತಿ ವತಿಯಿಂದ ಉಚಿತ ನೇತ್ರ ಪರೀಕ್ಷೆ ಮತ್ತು ಕನ್ನಡಕ ವಿತರಣೆ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ಕಲಾನುಸಂಧಾನ ಶಿಬಿರ

Suddi Udaya
error: Content is protected !!