ತೋಟತ್ತಾಡಿ: ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೈಲಂಗಡಿಯಲ್ಲಿ ನಾಗರ ಪಂಚಮಿ ಪ್ರಯುಕ್ತ ದೇವಸ್ಥಾನದ ಜಾಗದಲ್ಲಿರುವ ನಾಗಬನದಲ್ಲಿ ನಾಗದೇವರಿಗೆ ಪಂಚಮಿ ಪ್ರಯುಕ್ತ ಸಿಯಾಳ ಅಭಿಷೇಕ, ಹಾಲಿನ ಅಭಿಷೇಕ ಸಹಿತ ತಂಬಿಲಸೇವೆ ನಡೆಯಿತು.

ಊರಿನ ಮತ್ತು ಪರ ಊರಿನ ಭಕ್ತಾದಿಗಳು ನಾಗರಪಂಚಮಿಯ ಕಾರ್ಯಕ್ರಮದಲ್ಲಿ ಭಾಗಿಯಾದರು. ದೇವಸ್ಥಾನದ ಪದಾಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.












