ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿಯ ಬಂಟರ ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ ಸಭೆಯು ಸಂಘದ ಅಧ್ಯಕ್ಷ ಪ್ರಕಾಶ್ ಶೆಟ್ಟಿ ನೊಚ್ಚ ರವರ ಅಧ್ಯಕ್ಷತೆಯಲ್ಲಿ ಬಂಟರ ಸಂಘ ಗುರುವಾಯನಕೆರೆಯಲ್ಲಿ ನಡೆಯಿತು.
ಯುವ ವಿಭಾಗ ನೂತನ ಅಧ್ಯಕ್ಷರಾಗಿ ಅಜೇಯ್ ಶೆಟ್ಟಿ ಭಂಡಾರಿ ಗುಡ್ಡೆ, ಉಪಾಧ್ಯಕ್ಷರಾಗಿ ಕಾರ್ತಿಕ್ ರೈ ಇಡ್ಯಾಲ, ಕಾರ್ಯದರ್ಶಿಯಾಗಿ ನಿಧೀಶ್ ಶೆಟ್ಟಿ ಕೊರೆಲ್ಯ, ಕೋಶಾಧಿಕಾರಿಯಾಗಿ ನಿತಿನ್ ಶೆಟ್ಟಿ ಪಣೆಜಾಲು, ಜೊತೆ ಕಾರ್ಯದರ್ಶಿಯಾಗಿ ಪ್ರಕಾಶ್ ಶೆಟ್ಟಿ ಬಳೆಂಜ ಇವರುಗಳು ಆಯ್ಕೆಯಾಗಿದ್ದಾರೆ.
ಸಭೆಯಲ್ಲಿ ಬಂಟರ ಸಂಘದ ಕಾರ್ಯದರ್ಶಿ ಸುರೇಶ ಶೆಟ್ಟಿ ಲಾಯಿಲ, ಕೋಶಾಧಿಕಾರಿ ವಸಂತ ಶೆಟ್ಟಿ ಶ್ರದ್ದಾ, ಯುವ ವಿಭಾಗ ಸಂಚಾಲಕರಾದ ವೆಂಕಟ್ರಮಣ ಶೆಟ್ಟಿ ಉಜಿರೆ ಹಾಗೂ ಯುವ ವಿಭಾಗದ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.












