August 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ ಕುಕ್ಕಾವು ಕಾರ್ಯಕ್ಷೇತ್ರದಿಂದ ಪೌಷ್ಟಿಕ ಆಹಾರ ಅರಿವು ಕಾರ್ಯಕ್ರಮ


ಮುಂಡಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಬೆಳ್ತಂಗಡಿ ತಾಲೂಕು ಮುಂಡಾಜೆ ವಲಯದ ಕಡಿರುದ್ಯಾವರ ಕುಕ್ಕಾವು ಕಾರ್ಯಕ್ಷೇತ್ರದಲ್ಲಿ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಅರಿವು ಕಾರ್ಯಕ್ರಮವನ್ನು ಮಿತ್ತಬಾಗಿಲು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ ಬಂಗೇರರವರು ಹಿಂದಿನ ಕಾಲದಲ್ಲಿ ಬಳಸುತ್ತಿದ್ದ ಆಹಾರ ಪದ್ಧತಿಯನ್ನುಉಳಿಸುವ ಮಾಹಿತಿ ಕಾರ್ಯಕ್ರಮ ಇಂದಿನ ದಿನಗಳಲ್ಲಿ ಅವಶ್ಯಕತೆಯಿದ್ದು ಇದರ ಪ್ರಯೋಜನವನ್ನು ಪಡೆಯುವಂತೆ ತಿಳಿಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾದ ಉಷಾ ನಾಯಕ್ ರವರು ಕೇಸರಿ ಬಿಳಿ ಹಸಿರು ತರಕಾರಿ ಸೇವನೆ ಬಗ್ಗೆ ಸೊಪ್ಪು , ಕಾಳು, ತರಕಾರಿಯಲ್ಲಿರುವ ಪೌಷ್ಟಿಕಾಂಶದ ಬಗ್ಗೆ ಹಾಗೂ ಸಮತೋಲಿತ ಆಹಾರದ ಬಗ್ಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರಾದ ಪೂರ್ಣಿಮಾ ಹಾಗೂ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಮಧುರಾ ವಸಂತ್ ಉಪಸ್ಥಿತರಿದ್ದರು. ಸೇವಪ್ರತಿನಿಧಿ ರಶ್ಮಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಜ್ಞಾನ ವಿಕಾಸ ಕೇಂದ್ರದ ಸದಸ್ಯರಾದ ತುಳಸಿ ಸ್ವಾಗತಿಸಿ, ಕಮಲ ಧನ್ಯವಾದ ನೀಡಿದರು.

Related posts

ಧರ್ಮಸ್ಥಳ: ಅನ್ಯಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

Suddi Udaya

ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ರಾಮ ನವಮಿ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಶಾಲಾರಂಭದ ಸಂಭ್ರಮ

Suddi Udaya

ನಾಲ್ಕೂರು: ಸಿದ್ದಪ್ಪ ಪೂಜಾರಿ ನಿಧನ

Suddi Udaya

ಮಿತ್ತಬಾಗಿಲು ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರದಲ್ಲಿ ನಡೆಯಿತೊಂದು ಪವಾಡ: ಕಲಶೋತ್ಸವ ಸಂದರ್ಭದಲ್ಲಿ ಮಾಂಗಲ್ಯ ಸರಮಾಲೆ ಕಳೆದುಕೊಂಡ ಮಹಿಳೆಗೆ ಮಂದಿರದ ಆವರಣದಲ್ಲೇ ಸಿಕ್ಕಿತು ಮಾಂಗಲ್ಯ

Suddi Udaya

ಜ.17,18: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪ್ರವರ್ಧಿತ ಆರ್ಥಿಕತೆಯಲ್ಲಿ ಗ್ರಾಮೀಣ ಉದ್ಯಮಶೀಲತೆಯ ಪಾತ್ರ’ ಕುರಿತು ಅಂತರರಾಷ್ಟ್ರೀಯ ವಿಚಾರ ಸಂಕಿರಣ ‘

Suddi Udaya
error: Content is protected !!