25.5 C
ಪುತ್ತೂರು, ಬೆಳ್ತಂಗಡಿ
August 18, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಲಾಡಿ: ಅಪ್ರಾಪ್ತ ಬಾಲಕ ಸವಾರಿ ಮಾಡುತ್ತಿದ್ದ ಬೈಕ್ ಡಿಕ್ಕಿ: ರಸ್ತೆ ದಾಟುತ್ತಿದ್ದ ಶಾಲಾ ಬಾಲಕನಿಗೆ ಗಾಯ

ಬೆಳ್ತಂಗಡಿ: ಮಾಲಾಡಿ ಗ್ರಾಮದ ಬರ್ನ ಎಂಬಲ್ಲಿ ಮೋಟಾರ್ ಸೈಕಲ್ ಡಿಕ್ಕಿಯಾಗಿ 14 ವರ್ಷದ ಬಾಲಕ ಗಾಯಗೊಂಡ ಘಟನೆ ಆಗಸ್ಟ್ 15ರಂದು ನಡೆದಿದೆ.

ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದ ಮುಂಡಾಡಿ ಮನೆ ನಿವಾಸಿ ಜಗನ್ನಾಥ ಶೆಟ್ಟಿ (40) ರಿಕ್ಷಾ ಚಾಲಕರಾಗಿದ್ದು, ಆಗಸ್ಟ್ 15 ರಂದು ಬೆಳಗ್ಗೆ ಸುಮಾರು 10.30ಕ್ಕೆ ಕ್ಷಿತಿಜ್ (14) ಎಂಬಾತನನ್ನು ಆಟೋರಿಕ್ಷಾದಲ್ಲಿ ಆತನ ಮನೆಗೆ ಬಿಡಲು ಮಾಲಾಡಿ–ಗರ್ಡಾಡಿ ಡಾಮಾರು ರಸ್ತೆಯಲ್ಲಿ ತೆರಳುತ್ತಿದ್ದರು. ಬರ್ನ ತಲುಪಿದಾಗ ಕ್ಷಿತಿಜ್‌ನನ್ನು ರಿಕ್ಷಾದಿಂದ ಇಳಿಸಿ, ಆತ ರಸ್ತೆ ದಾಟುತ್ತಿದ್ದ ವೇಳೆ ಅಪ್ರಾಪ್ತ ಬಾಲಕನೊಬ್ಬ ಸಹಸವಾರನನ್ನು ಕುಳ್ಳಿರಿಸಿಕೊಂಡು ಬಂದ ಮೋಟಾರ್ ಸೈಕಲ್ KA-70-L-0120 ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕ್ಷಿತಿಜ್ ರಸ್ತೆಗೆ ಬಿದ್ದು ಹಣೆಗೆ ಹಾಗೂ ಕಾಲಿಗೆ ರಕ್ತಗಾಯಗಳಾಗಿವೆ.ಗಾಯಾಳುವನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೋಟಾರ್ ಸೈಕಲ್‌ನ್ನು ಕಾನೂನು ಸಂಘರ್ಷಕ್ಕೊಳಗಾದ ಬಾಲಕನು ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಕಲಂ 281, 125(ಎ) ಬಿಎನ್‌ಎಸ್ 2023 ಹಾಗೂ ಕಲಂ 199(ಎ) ಐಎಂವಿ ಕಾಯ್ದೆಯಡಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

Related posts

ಬೆಳ್ತಂಗಡಿ: ವಿಶೇಷ ಸಮಗ್ರ ಪರಿಷ್ಕರಣೆ–2026 ಅಂಗವಾಗಿ ಮತದಾರರ ಜಾಗೃತಿ ಕಾರ್ಯಕ್ರಮ

Suddi Udaya

ಬಂದಾರು, ಮೊಗ್ರು ಗ್ರಾಮಗಳಲ್ಲಿ ತೀವ್ರ ನೆಟ್‌ವರ್ಕ್ ಸಮಸ್ಯೆ: ಗ್ರಾಹಕರ ಆಕ್ರೋಶ ಉದ್ಯೋಗಿಗಳು, ವಿದ್ಯಾರ್ಥಿಗಳ ಪರದಾಟ

Suddi Udaya

ಶಟಲ್ ಬ್ಯಾಡ್ಮಿಟನ್ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ವಿಕಲಚೇತನರ ಇಲಾಖೆ ರಾಜ್ಯ ಆಯುಕ್ತೆ ಲತಾ ಕುಮಾರಿ (ಐ.ಎ.ಎಸ್) ಧರ್ಮಸ್ಥಳ ಭೇಟಿ

Suddi Udaya

ಕೊಯ್ಯೂರು ಗ್ರಾಮ ಪಂಚಾಯತ್ ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘದ ಪ್ರಭಾರ ಸಿಇಒ ಆಗಿ ಅಂಕಿತಾ ಬಿ ಅಧಿಕಾರ ಸ್ವೀಕಾರ

Suddi Udaya
error: Content is protected !!