August 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯ ಪ.ಪೂ. ವಿಭಾಗದಲ್ಲಿ “ಹೂಡಿಕೆಯ ವಿವಿಧ ಅವಕಾಶ” ಗಳ ಕುರಿತು ಕಾರ್ಯಾಗಾರ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್ ನಿಂದ ನಡೆಸಲ್ಪಡುವ ಎಲ್.ಸಿ.ಆರ್ ವಿದ್ಯಾಸಂಸ್ಥೆಯ ಪದವಿಪೂರ್ವ ವಿಭಾಗದಲ್ಲಿ ವಾಣಿಜ್ಯ ಸಂಘದ ವತಿಯಿಂದ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಿಗೆ ‘ ಹೂಡಿಕೆಯ ವಿವಿಧ ಅವಕಾಶಗಳ ‘ ಕುರಿತು ಕಾರ್ಯಾಗಾರವನ್ನು ನಡೆಸಲಾಯಿತು.

ಸಂಸ್ಥೆಯ ಸಂಯೋಜಕ ಯಶವಂತ್ ಜಿ. ನಾಯಕ್ ಅವರು ಕಾರ್ಯಗಾರವನ್ನು ನಡೆಸಿಕೊಟ್ಟರು. ಕಾರ್ಯಗಾರದಲ್ಲಿ ಹೂಡಿಕೆಯ ಅರ್ಥ, ಹೂಡಿಕೆ ಮಾಡಲು ಲಭ್ಯವಿರುವ ವಿವಿಧ ಮಾರ್ಗಗಳು ಹಾಗೂ ಅವುಗಳ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು. ಸಾಂಪ್ರದಾಯಿಕ ಹೂಡಿಕೆ ಮಾರ್ಗಗಳಾದ ಸ್ಥಿರ ಠೇವಣಿ (Fixed Deposit), LIC, ರಿಯಲ್ ಎಸ್ಟೇಟ್, ಚಿನ್ನ ಮತ್ತು ಬೆಳ್ಳಿ ಮುಂತಾದವುಗಳ ಬಗ್ಗೆ ವಿವರಿಸಲಾಯಿತು.

ಇದರೊಂದಿಗೆ, ಇಂದಿನ ಆಧುನಿಕ ಹೂಡಿಕೆ ಮಾರ್ಗಗಳಾದ ಷೇರು ಮಾರುಕಟ್ಟೆ, ಮ್ಯೂಚುವಲ್ ಫಂಡ್‌ಗಳು, ಕ್ರಿಪ್ಟೋಕರೆನ್ಸಿಗಳು, ETFಗಳು, ಷೇರುಗಳಲ್ಲಿ SIP ಹಾಗೂ ಮ್ಯೂಚುವಲ್ ಫಂಡ್‌ಗಳಲ್ಲಿ SIP ಮುಂತಾದವುಗಳ ಪರಿಚಯವನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು. ಪ್ರತಿಯೊಂದು ಹೂಡಿಕೆ ಮಾರ್ಗದ ಸ್ವರೂಪ, ಅಪಾಯ ಮತ್ತು ಸಾಧ್ಯತೆಗಳ ಕುರಿತು ಸರಳವಾಗಿ ವಿವರಿಸಲಾಯಿತು.

Related posts

ಕಳಿಯ ಗ್ರಾಮ ಪಂಚಾಯತ್ ಜನಸ್ಪಂದನ ಸಭೆ

Suddi Udaya

ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಕೋರ್ಟ್ ಗೆ ವರದಿ ಸಲ್ಲಿಕೆ: ಆರು ಮಂದಿ ಷಡ್ಯಂತ್ರ ಪ್ರಕರಣದಲ್ಲಿ ಭಾಗಿಯಾಗಿರುವುದು ಧೃಡ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ ಹಿಂಪಡೆಯುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಮನವಿ ನೀಡಲು ಬಂದ ತಿಮರೋಡಿ ಬೆಂಬಲಿಗರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅರಣ್ಯ ಅಧಿಕಾರಿಗಳಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ರಜತ ಮಹೋತ್ಸವ ಸಂಭ್ರಮ

Suddi Udaya

ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ದೇವಸ್ಥಾನಕ್ಕೆ ಭೇಟಿ

Suddi Udaya
error: Content is protected !!