August 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಚೆಕ್‌ಪೋಸ್ಟ್‌ನಲ್ಲಿ ಅಕ್ರಮ ಮರಳು ಸಾಗಾಟದ ಪಿಕಪ್ ಪತ್ತೆ

ಬೆಳ್ತಂಗಡಿ: ಚಾರ್ಮಾಡಿ ಚೆಕ್‌ಪೋಸ್ಟ್ ಬಳಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕ್‌ಅಪ್ ವಾಹನವನ್ನು ಧರ್ಮಸ್ಥಳ ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.

ಆ. 15ರಂದು ಬೆಳಗ್ಗೆ 9.45 ರ ಸುಮಾರಿಗೆ ಚಾರ್ಮಾಡಿ ಚೆಕ್‌ಪೋಸ್ಟ್‌ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಕಕ್ಕಿಂಜೆಯಿಂದ ಚಾರ್ಮಾಡಿ ಕಡೆಗೆ ಬರುತ್ತಿದ್ದ KA-21-B-0593 ನೋಂದಣಿ ಸಂಖ್ಯೆಯ ಮಹೇಂದ್ರ ಬೊಲೆರೋ ಪಿಕ್‌ಅಪ್ ವಾಹನವನ್ನು ನಿಲ್ಲಿಸಲು ಸೂಚಿಸಲಾಗಿದೆ. ಈ ವೇಳೆ ಚಾಲಕ ವಾಹನವನ್ನು ನಿಲ್ಲಿಸಿ ಕೆಳಗಿಳಿದು ಪರಾರಿಯಾಗಿದ್ದಾನೆ.

ವಾಹನವನ್ನು ಪರಿಶೀಲಿಸಿದಾಗ ಹಿಂಬದಿ ಬಾಡಿಯಲ್ಲಿ ಸುಮಾರು 30 ಬುಟ್ಟಿಯಷ್ಟು ಮರಳು ಪತ್ತೆಯಾಗಿದೆ. ಯಾವುದೇ ಇಲಾಖಾ ಅನುಮತಿ ಪಡೆಯದೆ ಹಾಗೂ ಸರ್ಕಾರಕ್ಕೆ ರಾಜಸ್ವ ಪಾವತಿಸದೆ ಮರಳನ್ನು ಸಾಗಾಟ ಮಾಡಿರುವುದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ.

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಮರಳಿನ ಅಂದಾಜು ಮೌಲ್ಯ 5,500 ಹಾಗೂ ಪಿಕ್‌ಅಪ್ ವಾಹನದ ಅಂದಾಜು ಮೌಲ್ಯ 2.50 ಲಕ್ಷ ಎಂದು ಅಂದಾಜಿಸಲಾಗಿದೆ. ಪೊಲೀಸರು ವಾಹನವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆರೋಪಿ ಪಿಕಪ್ ಚಾಲಕ ಚಾರ್ಮಾಡಿ ಗ್ರಾಮದ ಬೀಟಿಗೆ ನಿವಾಸಿ ಫಾಯಾಜ್ ವಿರುದ್ಧ BNS-2023ರ ಕಲಂ 303(2), MMCR Actನ ಕಲಂ 42, 43, 44 ಹಾಗೂ MMRD Actನ ಕಲಂ 4(1), 4(1A), 21(1)(1A) ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿದೆ.

Related posts

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ, 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ- ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಹಾಗೂ ವೇಣೂರು ಠಾಣೆ ವ್ಯಾಪ್ತಿಯ ಸೂಕ್ಷ ಸ್ಥಳಗಳಲ್ಲಿ ಅರೆಸೇನಾಪಡೆ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಪಥ ಸಂಚಲನ

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಯ ಗಣಿತ ಶಿಕ್ಷಕಿ ಪುಷ್ಪರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ಕನ್ಯಾಡಿ ಯಕ್ಷಭಾರತಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಕಳೆಂಜ ಗ್ರಾ. ಪಂ. ನಲ್ಲಿ ಪ್ರತಿಭಟನೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರ ಹಾಗೂ ಚಿಂತನಾ ದಿನಾಚರಣೆ

Suddi Udaya
error: Content is protected !!