25.5 C
ಪುತ್ತೂರು, ಬೆಳ್ತಂಗಡಿ
August 18, 2026
ಗ್ರಾಮಾಂತರ ಸುದ್ದಿ

ದೇವಾಂಗ ಸಮಾಜದ ಪದಗ್ರಹಣ ಪ್ರತಿಭಾ ಪುರಸ್ಕಾರ


ಮುಂಡಾಜೆ:ದೇವಾಂಗ ಸಮಾಜದ ಕುಲಕಸುಬು ನೇಯ್ಗೆ ವೃತ್ತಿಯು ನಾಗರಿಕ ಸಮಾಜ ನಿರ್ಮಾಣದ ಕಣ್ಣುಗಳಿದ್ದಂತೆ.ಈ ಬಗ್ಗೆ ನಮಗೆ ಹೆಮ್ಮೆ, ಗೌರವವಿದೆ.ಆದರೆ ಈಗಿನ ಕಾಲಘಟ್ಟದಲ್ಲಿ ವೃತ್ತಿಗೆ ಬಹಳಷ್ಟು ಗಂಡಾಂತರ ಇರುವುದರಿಂದ ಸಮಾಜದ ಮಕ್ಕಳು ಕಠಿಣ ಪರಿಶ್ರಮದಿಂದ ಶ್ರೇಷ್ಠ ವಿದ್ಯಾಭ್ಯಾಸವನ್ನು ಮಾಡಿ ಪರ್ಯಾಯ ಉದ್ಯೋಗ ಹುಡುಕುವ ಅವಶ್ಯಕತೆ ಇದೆ ಎಂದು ದೇವಾಂಗ ಸಂಘ(ರಿ) ಬೆಂಗಳೂರು ಇದರ ಅಧ್ಯಕ್ಷ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಡಾ.ಜಿ ರಮೇಶ್ ಹೇಳಿದರು.


ಇತ್ತೀಚೆಗೆ ಮುಂಡಾಜೆ ಶ್ರೀ ಪರಶುರಾಮ ದೇವಸ್ಥಾನದ ಸಭಾಂಗಣದಲ್ಲಿ ನಡೆದ ದೇವಾಂಗ ಸಮಾಜ -ಮುಂಡಾಜೆ ಘಟಕ ಆಯೋಜಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ದೇವಾಂಗ ಸಮಾಜ ಬಾಂಧವರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ನೆರವೇರಿಸಿ ಮಾತಾನಾಡಿದರು.
ಸಾಹಿತಿ ಮತ್ತು ಚಿಕ್ಕಮಗಳೂರಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ನಾಗಶ್ರೀ ತ್ಯಾಗರಾಜ್ ರವರು ದಿಕ್ಸೂಚಿ ಭಾಷಣದಲ್ಲಿ ಮುಂಡಾಜೆ ದೇವಾಂಗ ಸಮಾಜವು ಕೈಗೊಂಡ ಇಂತಹ ಅಧ್ಬುತ ಪ್ರಯತ್ನವನ್ನು ಶ್ಲಾಘಿಸಿ,ಸಂಘಟನೆಯ ಶಕ್ತಿಯನ್ನು ವಿವರಿಸಿದರು.
ವೇದಿಕೆಯಲ್ಲಿ ಕರ್ನಾಟಕ ರಾಜ್ಯ ದೇವಾಂಗ ಸಂಘದ ಮಾಜಿ ಸಂಘಟನಾ ಕಾರ್ಯದರ್ಶಿ ಮತ್ತು ತರೀಕೆರೆ ಪುರಸಭೆಯ ಮಾಜಿ ಸದಸ್ಯ ಟಿ.ಆರ್.ಶ್ರೀಧರ್,* ಚಿಕ್ಕಮಗಳೂರಿನ ಮಾಜಿ ನಗರಸಭಾ ಸದಸ್ಯ ಹಾಗೂ ಕರ್ನಾಟಕ ರಾಜ್ಯ ದೇವಾಂಗ ಸಂಘದ ಕಾರ್ಯದರ್ಶಿ ರವಿಕುಮಾರ್, ಕಡೂರಿನ ದೇವಾಂಗ ಸಂಘದ ಅಧ್ಯಕ್ಷ ಹರೀಶ್ ಮುಖ್ಯ ಅತಿಥಿಗಳಾಗಿ ಮಾತಾನಾಡಿದರು.ಸಭೆಯ ಅಧ್ಯಕ್ಷತೆಯನ್ನು ದೇವಾಂಗ ಸಮಾಜ -ಮುಂಡಾಜೆ ಘಟಕದ ಅಧ್ಯಕ್ಷ ರಾಜ್ ಗೋಪಾಲ್ ವಹಿಸಿದ್ದರು.ಸಭೆಯಲ್ಲಿ ಶ್ರೀ ಚೌಡೇಶ್ವರಿ ದೇವಸ್ಥಾನ ಕೆಮ್ಮಾರದ ಆಡಳಿತ ಮೊಕ್ತೇಸರರಾದ ಸಂಜೀವ ಬಡ್ಡಮೆ, ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರದ ಅಧ್ಯಕ್ಷ ಲೋಕಯ್ಯ ನೇಕಾರ, ದೇವಾಂಗ ಸಮಾಜ ಉಜಿರೆ ವಲಯದ ಅಧ್ಯಕ್ಷ ರವಿ ನೆಯ್ಯಾಲು,ಮುಂಡಾಜೆ ದೇವಾಂಗ ಸಮಾಜದ ನೂತನ ಅಧ್ಯಕ್ಷ ಶಶಿಧರ್ ಬನಶಂಕರಿ, ಕಾರ್ಯದರ್ಶಿ ಮಹೇಂದ್ರ ಕೊಡಂಗೆ,ನೂತನ ಕಾರ್ಯದರ್ಶಿ ಸಚಿನ್ ಎಂ ಎಸ್ ಮತ್ತಿತರರು ಉಪಸ್ಥಿತರಿದ್ದರು

ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಜಿಲ್ಲೆಯ ಸಮಾಜದ ವಿಶೇಷ ಪ್ರತಿಭೆಗಳಿಗೆ ಸನ್ಮಾನ,ನಿಧಿ ಸಮರ್ಪಣೆ ಮಾಡಿದವರಿಗೆ ಅಭಿನಂದನೆ ಸಲ್ಲಿಸಲಾಯಿತು.ತದನಂತರ ದೇವಾಂಗ ಸಮಾಜ -ಮುಂಡಾಜೆ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣವು ಪಣವೀಳ್ಯ ನೀಡುವ ಮೂಲಕ ನಡೆಸಲಾಯಿತು.ಮುಂಡಾಜೆ ದೇವಾಂಗ ಘಟಕದ ನೂತನ ಲಾಂಛನವನ್ನು ಸಚಿನ್ ಎಂ ಎಸ್ ತಯಾರಿಸಿದ್ದು ಅಧಿಕೃತವಾಗಿ ಬಿಡುಗಡೆ ಮಾಡಲಾಯಿತು.ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ದೇವಾಂಗ ಸಮಾಜದ ಬಹುತೇಕ ಬಾಂಧವರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಕೇಶವ ದೇವಾಂಗ ಕಡಂಬಳ್ಳಿ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು.ಮಾಜಿ ಜೊತೆ ಕಾರ್ಯದರ್ಶಿ ಸವಿತಾ ಕೇಶವ ದೇವಾಂಗ ವರದಿ ವಾಚಿಸಿದರು.ಸೌಮ್ಯಗಣೇಶ್ ಮೂಲಾರು ಮತ್ತು ಸೌಮ್ಯ ರೋಹಿತ್ ವಿದ್ಯಾರ್ಥಿಗಳ ಪುರಸ್ಕಾರಕ್ಕೆ ಸಹಕರಿಸಿದರು.ಶಿವಾನಂದ ಮೂಲಾರು ವಂದಿಸಿದರು ದೇವಾಂಗ ಸಮಾಜ ಉಜಿರೆ ವಲಯದ ಸಂಘಟನಾ ಕಾರ್ಯದರ್ಶಿ ರೋಹಿತ್ ಕಾಶಿ ಬೆಟ್ಟು ಕಾರ್ಯಕ್ರಮ ನಿರೂಪಿಸಿದರು.

Related posts

ಅರಸಿನಮಕ್ಕಿ: ಉಪರಡ್ಕದಲ್ಲಿ ಆಟೋ ರಿಕ್ಷಾ ಹಾಗೂ ಬೈಕ್ ಡಿಕ್ಕಿ

Suddi Udaya

ನ.4 : ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಬೃಹತ್ ರಕ್ತದಾನ  ಶಿಬಿರ 

Suddi Udaya

ಉಜಿರೆ: ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya

ಬೆಳ್ತಂಗಡಿ ಡಿವೈನ್ ಪಾರ್ಕ್ ಸಾಲಿಗ್ರಾಮ, ಇದರ ಅಂಗ ಸಂಸ್ಥೆಗಳಲ್ಲಿ ಒಂದಾದ ವಿವೇಕ ಜಾಗ್ರತ ಬಳಗದಿಂದ ಮಳೆಗಾಗಿ ಪ್ರಾರ್ಥನೆ

Suddi Udaya

ಪಡಂಗಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮಸಭೆ

Suddi Udaya

ಬಾರ್ಯ: ಖಾಸಗಿ ಬ್ಯಾಂಕಿನ ಎಟಿಎಂ ನಿಂದ ದರೋಡೆಗೆ ಯತ್ನ

Suddi Udaya
error: Content is protected !!