ಬೆಳ್ತಂಗಡಿ: ವಿಶ್ವ ಛಾಯಾಗ್ರಹಣ ದಿನಾಚರಣೆಯ ಅಂಗವಾಗಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬ್ರಹ್ಮಾವರ ವಲಯ ಹಾಗೂ ರೋಟರಿ ಕ್ಲಬ್ ಬ್ರಹ್ಮಾವರ ಇವರ ಸಂಯುಕ್ತ ಆಶ್ರಯದಲ್ಲಿ ನೀಡಲಾಗುವ ಪ್ರತಿಷ್ಟಿತ ಛಾಯಾರತ್ನ ಪ್ರಶಸ್ತಿಗೆ ಉಮೇಶ್ ಮದ್ದಡ್ಕ ಆಯ್ಕೆಯಾಗಿದ್ದಾರೆ.
ಇವರು ಮದ್ದಡ್ಕ ಮನು ಸ್ಟುಡಿಯೋ ಮಾಲಕರು, ಸೌತ್ ಕೆನರಾ ಫೋಟೊಗ್ರಾಫರ್ ಅಸೋಸಿಯೇಶನ್ ದ.ಕ-ಉಡುಪಿ ಜಿಲ್ಲಾ ಮಾಜಿ ಮಾಧ್ಯಮ ಪ್ರತಿನಿಧಿ, ಸೌತ್ ಕೆನರಾ ಫೋಟೊಗ್ರಾಫರ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ಮಾಜಿ ಅಧ್ಯಕ್ಷರು, ತಾಲೂಕಿನ ಹಲವಾರು ಸಂಘ-ಸಂಸ್ಥೆಗಳಲ್ಲಿ ಅಧ್ಯಕ್ಷರು, ಪದಾಧಿಕಾರಿಗಳಾಗಿ, ತಾಲೂಕಿನ ವಾರ ಪ್ರತಿಕೆಗಳ ವರದಿಗಾರರಾಗಿ ಸೇವೆ ಸಲ್ಲಿಸುತ್ತಿರುವ ಸಂಘಟನಾ ಚತುರ, ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದಾರೆ.
ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಇಂದು (ಆ.18) ಸಂಜೆ ಬ್ರಹ್ಮಾವರ ರೋಟರಿ ಕ್ಲಬ್ ಭವನದಲ್ಲಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಬ್ರಹ್ಮಾವರ ವಲಯದ ರಜತ ಸಂಭ್ರಮದ ಪ್ರಯುಕ್ತ ಜರಗಲಿದೆ.












