August 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯ ಪ.ಪೂ. ವಿಭಾಗದಲ್ಲಿ “ಹೂಡಿಕೆಯ ವಿವಿಧ ಅವಕಾಶ” ಗಳ ಕುರಿತು ಕಾರ್ಯಾಗಾರ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್ ನಿಂದ ನಡೆಸಲ್ಪಡುವ ಎಲ್.ಸಿ.ಆರ್ ವಿದ್ಯಾಸಂಸ್ಥೆಯ ಪದವಿಪೂರ್ವ ವಿಭಾಗದಲ್ಲಿ ವಾಣಿಜ್ಯ ಸಂಘದ ವತಿಯಿಂದ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಿಗೆ ‘ ಹೂಡಿಕೆಯ ವಿವಿಧ ಅವಕಾಶಗಳ ‘ ಕುರಿತು ಕಾರ್ಯಾಗಾರವನ್ನು ನಡೆಸಲಾಯಿತು.

ಸಂಸ್ಥೆಯ ಸಂಯೋಜಕ ಯಶವಂತ್ ಜಿ. ನಾಯಕ್ ಅವರು ಕಾರ್ಯಗಾರವನ್ನು ನಡೆಸಿಕೊಟ್ಟರು. ಕಾರ್ಯಗಾರದಲ್ಲಿ ಹೂಡಿಕೆಯ ಅರ್ಥ, ಹೂಡಿಕೆ ಮಾಡಲು ಲಭ್ಯವಿರುವ ವಿವಿಧ ಮಾರ್ಗಗಳು ಹಾಗೂ ಅವುಗಳ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು. ಸಾಂಪ್ರದಾಯಿಕ ಹೂಡಿಕೆ ಮಾರ್ಗಗಳಾದ ಸ್ಥಿರ ಠೇವಣಿ (Fixed Deposit), LIC, ರಿಯಲ್ ಎಸ್ಟೇಟ್, ಚಿನ್ನ ಮತ್ತು ಬೆಳ್ಳಿ ಮುಂತಾದವುಗಳ ಬಗ್ಗೆ ವಿವರಿಸಲಾಯಿತು.

ಇದರೊಂದಿಗೆ, ಇಂದಿನ ಆಧುನಿಕ ಹೂಡಿಕೆ ಮಾರ್ಗಗಳಾದ ಷೇರು ಮಾರುಕಟ್ಟೆ, ಮ್ಯೂಚುವಲ್ ಫಂಡ್‌ಗಳು, ಕ್ರಿಪ್ಟೋಕರೆನ್ಸಿಗಳು, ETFಗಳು, ಷೇರುಗಳಲ್ಲಿ SIP ಹಾಗೂ ಮ್ಯೂಚುವಲ್ ಫಂಡ್‌ಗಳಲ್ಲಿ SIP ಮುಂತಾದವುಗಳ ಪರಿಚಯವನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು. ಪ್ರತಿಯೊಂದು ಹೂಡಿಕೆ ಮಾರ್ಗದ ಸ್ವರೂಪ, ಅಪಾಯ ಮತ್ತು ಸಾಧ್ಯತೆಗಳ ಕುರಿತು ಸರಳವಾಗಿ ವಿವರಿಸಲಾಯಿತು.

Related posts

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಎಕ್ಸೆಲ್ ಗುರುವಾಯನಕೆರೆ ರಾಜ್ಯದಲ್ಲೇ ಅಮೋಘ ಸಾಧನೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್.ಇ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya

ಗುರುವಾಯನಕೆರೆ: ವರದ ಪಾಂಡುರಂಗ ವಿಠಲ ಮಂದಿರದ ಕಾಣಿಕೆ ಡಬ್ಬಿ ಹಣ ಕಳವು

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಿಂದ ಗುರುವಾಯನಕೆರೆಯಲ್ಲಿ ಮಾರುತಿ ಸುಜುಕಿ ಕಾರುಗಳ ಬುಕ್ಕಿಂಗ್ ಆರಂಭ

Suddi Udaya

ಮಾಲಾಡಿ ನಿವಾಸಿ ಅನಿಲ್ ಪ್ರವೀಣ ಪಿರೇರಾ ನಾಪತ್ತೆ: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!