ಗುರುವಾಯನಕೆರೆ: ಶಾಸಕ ಹರೀಶ್ ಪೂಂಜ ಅವರ ಹುಟ್ಟುಹಬ್ಬದ ಪ್ರಯುಕ್ತ ಸಾಯಿ ರಾಮ್ ಫ್ರೆಂಡ್ಸ್ ಶಕ್ತಿನಗರ, ಗುರುವಾಯನಕೆರೆ ವತಿಯಿಂದ ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕರ ಹುಟ್ಟುಹಬ್ಬದ ಪ್ರಯುಕ್ತ ಸಮಾಜಮುಖಿ ಕಾರ್ಯಕ್ಕೆ ಸಂಕಲ್ಪ ಮಾಡಲಾಯಿತು. ಕುವೆಟ್ಟು ಗ್ರಾಮದ ಬರಾಯ ನಿವಾಸಿ ಕಮಲ ಅವರಿಗೆ ಶಾಸಕ ಹರೀಶ್ ಪೂಂಜ ಅವರ ಸಹಕಾರದೊಂದಿಗೆ, ಸಾಯಿ ರಾಮ್ ಫ್ರೆಂಡ್ಸ್ ಹಾಗೂ ದಾನಿಗಳ ನೆರವಿನಿಂದ ಮನೆ ನಿರ್ಮಿಸಿಕೊಡುವ ಕಾರ್ಯ ಯಶಸ್ವಿಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಸಾಯಿ ರಾಮ್ ಫ್ರೆಂಡ್ಸ್ ಶಕ್ತಿನಗರ ಅಧ್ಯಕ್ಷ ಪ್ರದೀಪ್ ಶೆಟ್ಟಿ ಶಕ್ತಿನಗರ, ದೇವಿಪ್ರಸಾದ್ ಆಚಾರ್ಯ ಶಕ್ತಿನಗರ, ವಿತೇಶ್ ಪಾಡ್ಯರ್, ಪ್ರದೀಪ್ ಶೆಟ್ಟಿ ನವಶಕ್ತಿ, ನಿಮಿತ್ ಪೂಜಾರಿ ಪಾಡ್ಯರ್, ಪವನ್ ಬಂಗೇರ ಬರಾಯ, ರಮೇಶ್ ಬರಾಯ ಹಾಗೂ ಸಾಯಿ ರಾಮ್ ಫ್ರೆಂಡ್ಸ್ ಶಕ್ತಿನಗರ ತಂಡದ ಸದಸ್ಯರು ಉಪಸ್ಥಿತರಿದ್ದರು.












