August 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ರತ್ನಮಾನಸದಲ್ಲಿ ಆಟಿದ ಅಟಿಲ್ ಕಾರ್ಯಕ್ರಮ

ಉಜಿರೆ: ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಆಟಿದ ಅಟಿಲ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಧಾರ್ಮಿಕ ಚಿಂತಾಕರಾಗಿರುವ ವೇದಮೂರ್ತಿ ಡಾ ಶ್ರೀ ಕೃಷ್ಣ ಉಪಾಧ್ಯಾಯ ಇವರು ಮಾತನಾಡಿ ಹಿಂದಿನ ಕಾಲದಲ್ಲಿ ಜನರು ಆಟಿ ತಿಂಗಳಿಗೆ ವಿಶೇಷ ಗಮನ ಇಟ್ಟು ವಿವಿಧ ಬಗೆಯ ಸೊಪ್ಪುಗಳ ತಿನಿಸುಗಳನ್ನು ಮಾಡಿ ಆಚರಣೆ ಮಾಡುತ್ತಿದ್ದರು. ಆಟಿ ತಿಂಗಳಲ್ಲಿ ಮಾಡುವಂತಹ ಆಹಾರಗಳು ಮನುಷ್ಯನಿಗೆ ಬಹಳ ಉಪಯುಕ್ತವಾಗಿದೆ ಹಾಗೂ ಔಷಧೀಯ ಗುಣಗಳನ್ನು ಹೊಂದಿದೆ ಎಂದು ತಿಳಿಸಿದರು .ಇಂತಹ ಸಂಸ್ಕೃತಿಯನ್ನು ಬೆಳೆಸಬೇಕು ಮತ್ತು ಮುಂದಿನ ಪೀಳಿಗೆಗೆ ಕಲಿಸಬೇಕು ಎಂದು ಹೇಳಿದರು.

ಅಧ್ಯಕ್ಷೀಯ ಮಾತುಗಳನ್ನಾಡಿದ ರತ್ನಮಾನಸ ನಿಲಯದ ಪಾಲಕ ಯತೀಶ್ ಕೆ ಬಳಂಜ ಇವರು ಪೂರ್ವಜರು ತಿನ್ನುತ್ತಿದ್ದ ಆಹಾರ ಪದ್ದತಿಯನ್ನು ಇಂದಿನ ಮಕ್ಕಳು ಉಪಯೋಗಿಸಬೇಕು. ಅದರ ಬಗೆಗೆ ಮಾಹಿತಿಯನ್ನು ತಿಳಿದುಕೊಳ್ಳಬೇಕು ಹಾಗೂ ಪ್ರಕೃತಿ ಕೊಡುವಂತಹ ಆಹಾರಗಳನ್ನು ಬಳಸಿಕೊಳ್ಳಬೇಕು ಎಂದು ತಿಳಿಸಿದರು. ನಿಲಯದ ವಿದ್ಯಾರ್ಥಿ ಮಣಿ ಎಸ್ ಆರ್ ಸ್ವಾಗತಿಸಿದರು. ವಿದ್ಯಾರ್ಥಿ ಚಿರಂತ್ ಧನ್ಯವಾದ ಸಲ್ಲಿಸಿದರು. ಸುಮಾರು 21 ವಿವಿಧ ಬಗೆಯ ತಿಂಡಿ ತಿನಿಸುಗಳನ್ನು ತಯಾರಿಸಲಾಗಿರುತ್ತದೆ. ವಿದ್ಯಾರ್ಥಿಗಳು ,ಪೋಷಕರು ಮತ್ತು ಶಾಲಾ ಸಿಬ್ಬಂದಿಗಳು ಮತ್ತು ಊರ ಗಣ್ಯರು ಭಾಗವಹಿಸಿದ್ದರು ಹಾಗೂ ರತ್ನಮಾನಸ ನಿಲಯದ ಅಧ್ಯಾಪಕರಾದ ರವಿಚಂದ್ರ, ಉದಯರಾಜ್ ಹಾಗೂ ದೀಪಕ್ ಉಪಸ್ಥಿತರಿದ್ದರು .

Related posts

ಬೆಳಾಲು: ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಕ್ಯಾನ್ ಫಿನ್ ಹೋಮ್ ಲಿ.ನಿಂದ ಸಿ.ಎಸ್.ಆರ್ ಫಂಡ್ ಹಸ್ತಾಂತರ

Suddi Udaya

ಶಿಶಿಲ ಗ್ರಾಮ ಪಂಚಾಯತ್‌ ಗ್ರಾಮ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಫೋನೆಟಿಕ್ಸ್ ಇನ್ ಆಕ್ಷನ್: ಎಂಗೇಜಿಂಗ್ ಯಂಗ್ ಮೈಂಡ್ಸ್’ ಕಾರ್ಯಾಗಾರ

Suddi Udaya

ವನ್ಯಜೀವಿ ವಿಭಾಗದಿಂದ ಹುಲಿ ಗಣತಿ ಹಿನ್ನೆಲೆ: ನಾಳೆಯಿಂದ ಗಡಾಯಿಕಲ್ಲು ಸೇರಿದಂತೆ ಫಾಲ್ಸ್ ಗಳು ಬಂದ್

Suddi Udaya
error: Content is protected !!