August 19, 2026
ಆಯ್ಕೆಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೆಎಸ್‌ಸಿಎ ಅಂತರ ವಲಯ ಕ್ರಿಕೆಟ್‌ಗೆ ಸೇಕ್ರೆಡ್ ಹಾರ್ಟ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಆಯ್ಕೆ

ಬೆಂಗಳೂರಿನಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಆಯೋಜಿಸಿರುವ ಬಾಲಕರ ಅಂತರ ವಲಯ ಯು-23 ಹಾಗೂ ಯು-19 ಕ್ರಿಕೆಟ್ ಪಂದ್ಯಾವಳಿಗೆ ಸೇಕ್ರೆಡ್ ಹಾರ್ಟ್ ಕಾಲೇಜು, ಮಡಂತ್ಯಾರು ಇದರ ಒಟ್ಟು ಮೂವರು ವಿದ್ಯಾರ್ಥಿಗಳು ಮಂಗಳೂರು ವಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಬಾಲಕರ ಯು-23 ತಂಡಕ್ಕೆ ದ್ವಿತೀಯ ಎಂ.ಕಾಂ. ವಿದ್ಯಾರ್ಥಿ ಋಷಿ ಬಿ. ಶೆಟ್ಟಿ ಹಾಗೂ ತೃತೀಯ ಬಿ.ಕಾಂ. ವಿದ್ಯಾರ್ಥಿ ನಿಖಿಲ್ ಐತಾಳ್ ಆಯ್ಕೆಯಾಗಿದ್ದಾರೆ. ಬಾಲಕರ ಯು-19 ತಂಡಕ್ಕೆ ಪ್ರಥಮ ಬಿ.ಕಾಂ. ವಿದ್ಯಾರ್ಥಿ ಆಯುಷ್ ಆಚಾರ್ಯ ಆಯ್ಕೆಯಾಗಿದ್ದಾರೆ.

ವಿಶೇಷವಾಗಿ, ಋಷಿ ಬಿ. ಶೆಟ್ಟಿ ಅವರು ಬಾಲಕರ ಯು-23 ಮಂಗಳೂರು ವಲಯ ತಂಡದ ನಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಸೇಕ್ರೆಡ್ ಹಾರ್ಟ್ ಕಾಲೇಜಿನ ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ದೈಹಿಕ ಶಿಕ್ಷಣ ನಿರ್ದೇಶಕರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Related posts

ಉಜಿರೆ: ವಿದ್ಯಾನಗರ ನಿವಾಸಿ ಗೀತಾ ಆಚಾರ್ಯ ನಿಧನ

Suddi Udaya

ಟೇಬಲ್ ಟೆನಿಸ್ ಪಂದ್ಯಾಟ: ಪೆರಿಂಜೆ ಎಸ್.ಡಿ.ಎಮ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಜೀವ ವಿಮಾ ನಿಗಮ ಪ್ರತಿನಿಧಿಗಳ ಸಂಘದ ದಕ್ಷಿಣ ಮಧ್ಯವಲಯ ಉಪಾಧ್ಯಕ್ಷರಾಗಿ ಧರ್ಮಸ್ಥಳದ ಎ. ಎಸ್. ಲೋಕೇಶ್ ಶೆಟ್ಟಿ ಆಯ್ಕೆ

Suddi Udaya

ಉಜಿರೆಯಲ್ಲಿ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಸಭೆ : ಕೆ.ಪಿ.ಸಿ.ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್‌ ಭಾಗಿ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಐಕ್ಯುಎಸಿ ವತಿಯಿಂದ ಹಳ್ಳಿ ಸಂತೆ ಕಾರ್ಯಕ್ರಮ

Suddi Udaya

ನಾರಾವಿ:ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ ಚಿಣ್ಣರ ಕಲರವ – ಕ್ರೀಡಾಸಂಗಮ

Suddi Udaya
error: Content is protected !!