ಬೆಂಗಳೂರಿನಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಆಯೋಜಿಸಿರುವ ಬಾಲಕರ ಅಂತರ ವಲಯ ಯು-23 ಹಾಗೂ ಯು-19 ಕ್ರಿಕೆಟ್ ಪಂದ್ಯಾವಳಿಗೆ ಸೇಕ್ರೆಡ್ ಹಾರ್ಟ್ ಕಾಲೇಜು, ಮಡಂತ್ಯಾರು ಇದರ ಒಟ್ಟು ಮೂವರು ವಿದ್ಯಾರ್ಥಿಗಳು ಮಂಗಳೂರು ವಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಬಾಲಕರ ಯು-23 ತಂಡಕ್ಕೆ ದ್ವಿತೀಯ ಎಂ.ಕಾಂ. ವಿದ್ಯಾರ್ಥಿ ಋಷಿ ಬಿ. ಶೆಟ್ಟಿ ಹಾಗೂ ತೃತೀಯ ಬಿ.ಕಾಂ. ವಿದ್ಯಾರ್ಥಿ ನಿಖಿಲ್ ಐತಾಳ್ ಆಯ್ಕೆಯಾಗಿದ್ದಾರೆ. ಬಾಲಕರ ಯು-19 ತಂಡಕ್ಕೆ ಪ್ರಥಮ ಬಿ.ಕಾಂ. ವಿದ್ಯಾರ್ಥಿ ಆಯುಷ್ ಆಚಾರ್ಯ ಆಯ್ಕೆಯಾಗಿದ್ದಾರೆ.
ವಿಶೇಷವಾಗಿ, ಋಷಿ ಬಿ. ಶೆಟ್ಟಿ ಅವರು ಬಾಲಕರ ಯು-23 ಮಂಗಳೂರು ವಲಯ ತಂಡದ ನಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಸೇಕ್ರೆಡ್ ಹಾರ್ಟ್ ಕಾಲೇಜಿನ ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ದೈಹಿಕ ಶಿಕ್ಷಣ ನಿರ್ದೇಶಕರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.












