August 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ರತ್ನಮಾನಸದಲ್ಲಿ ಆಟಿದ ಅಟಿಲ್ ಕಾರ್ಯಕ್ರಮ

ಉಜಿರೆ: ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಆಟಿದ ಅಟಿಲ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಧಾರ್ಮಿಕ ಚಿಂತಾಕರಾಗಿರುವ ವೇದಮೂರ್ತಿ ಡಾ ಶ್ರೀ ಕೃಷ್ಣ ಉಪಾಧ್ಯಾಯ ಇವರು ಮಾತನಾಡಿ ಹಿಂದಿನ ಕಾಲದಲ್ಲಿ ಜನರು ಆಟಿ ತಿಂಗಳಿಗೆ ವಿಶೇಷ ಗಮನ ಇಟ್ಟು ವಿವಿಧ ಬಗೆಯ ಸೊಪ್ಪುಗಳ ತಿನಿಸುಗಳನ್ನು ಮಾಡಿ ಆಚರಣೆ ಮಾಡುತ್ತಿದ್ದರು. ಆಟಿ ತಿಂಗಳಲ್ಲಿ ಮಾಡುವಂತಹ ಆಹಾರಗಳು ಮನುಷ್ಯನಿಗೆ ಬಹಳ ಉಪಯುಕ್ತವಾಗಿದೆ ಹಾಗೂ ಔಷಧೀಯ ಗುಣಗಳನ್ನು ಹೊಂದಿದೆ ಎಂದು ತಿಳಿಸಿದರು .ಇಂತಹ ಸಂಸ್ಕೃತಿಯನ್ನು ಬೆಳೆಸಬೇಕು ಮತ್ತು ಮುಂದಿನ ಪೀಳಿಗೆಗೆ ಕಲಿಸಬೇಕು ಎಂದು ಹೇಳಿದರು.

ಅಧ್ಯಕ್ಷೀಯ ಮಾತುಗಳನ್ನಾಡಿದ ರತ್ನಮಾನಸ ನಿಲಯದ ಪಾಲಕ ಯತೀಶ್ ಕೆ ಬಳಂಜ ಇವರು ಪೂರ್ವಜರು ತಿನ್ನುತ್ತಿದ್ದ ಆಹಾರ ಪದ್ದತಿಯನ್ನು ಇಂದಿನ ಮಕ್ಕಳು ಉಪಯೋಗಿಸಬೇಕು. ಅದರ ಬಗೆಗೆ ಮಾಹಿತಿಯನ್ನು ತಿಳಿದುಕೊಳ್ಳಬೇಕು ಹಾಗೂ ಪ್ರಕೃತಿ ಕೊಡುವಂತಹ ಆಹಾರಗಳನ್ನು ಬಳಸಿಕೊಳ್ಳಬೇಕು ಎಂದು ತಿಳಿಸಿದರು. ನಿಲಯದ ವಿದ್ಯಾರ್ಥಿ ಮಣಿ ಎಸ್ ಆರ್ ಸ್ವಾಗತಿಸಿದರು. ವಿದ್ಯಾರ್ಥಿ ಚಿರಂತ್ ಧನ್ಯವಾದ ಸಲ್ಲಿಸಿದರು. ಸುಮಾರು 21 ವಿವಿಧ ಬಗೆಯ ತಿಂಡಿ ತಿನಿಸುಗಳನ್ನು ತಯಾರಿಸಲಾಗಿರುತ್ತದೆ. ವಿದ್ಯಾರ್ಥಿಗಳು ,ಪೋಷಕರು ಮತ್ತು ಶಾಲಾ ಸಿಬ್ಬಂದಿಗಳು ಮತ್ತು ಊರ ಗಣ್ಯರು ಭಾಗವಹಿಸಿದ್ದರು ಹಾಗೂ ರತ್ನಮಾನಸ ನಿಲಯದ ಅಧ್ಯಾಪಕರಾದ ರವಿಚಂದ್ರ, ಉದಯರಾಜ್ ಹಾಗೂ ದೀಪಕ್ ಉಪಸ್ಥಿತರಿದ್ದರು .

Related posts

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬಾರ್ಯ ಗ್ರಾ.ಪಂ ಎದುರು ಬಿಜೆಪಿ ಪ್ರತಿಭಟನೆ

Suddi Udaya

ಲಾಯಿಲ 38 ನೇ ವರ್ಷದ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಗಣೇಶ್ ಆರ್, ಕಾರ್ಯದರ್ಶಿಯಾಗಿ ಅರವಿಂದ್ ಕುಮಾರ್, ಕೋಶಾಧಿಕಾರಿಯಾಗಿ ದಿನೇಶ್ ಶೆಟ್ಟಿ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಜಿಲ್ಲಾ ಮಟ್ಟಕ್ಕೆ ಆಯ್ಕೆ.

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ಗ್ರಾಮ ಸಭೆಯಲ್ಲಿ ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

Suddi Udaya

ಕಡಿರುದ್ಯಾವರ : ಪಾದಚಾರಿಗೆ ಬೈಕ್ ಡಿಕ್ಕಿ: ಗಂಭೀರ ಗಾಯ

Suddi Udaya

ಜಿಲ್ಲಾ ಮಟ್ಟದ ಭಾವೈಕ್ಯತೆ ಮಕ್ಕಳ ಮೇಳ: ಕುಂಭಶ್ರೀ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
error: Content is protected !!