August 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲಾಯ ಗುತ್ತು ಧರ್ಮಚಾವಡಿಯಲ್ಲಿ ಸಂಪತ್ ಬಿ. ಸುವರ್ಣರಿಗೆ ಅಭಿನಂದನೆ

ಬೆಳ್ತಂಗಡಿ: ತುಳುನಾಡಿನ ಹೆಮ್ಮೆಯ ಸಾಂಪ್ರದಾಯಿಕ ಕೌಟುಂಬಿಕ ಪರಂಪರೆ ಹಾಗೂ ಧಾರ್ಮಿಕ ಕೇಂದ್ರವಾದ ಶ್ರೀ ಕಲಾಯ ಗುತ್ತು ಧರ್ಮಚಾವಡಿಯಲ್ಲಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷರಾದ ಸಂಪತ್ ಬಿ. ಸುವರ್ಣ ಅವರಿಗೆ ಕಲಾಯಗುತ್ತಿನ ಕುಟುಂಬಸ್ಥರಿಂದ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಲಾಯಿತು.

ಕರಾವಳಿ ಭಾಗದ ಗುತ್ತಿನ ಮನೆಗಳ ಸಾಂಸ್ಕೃತಿಕ ಹಿನ್ನೆಲೆ, ದೈವಾರಾಧನೆ ಹಾಗೂ ಸಾಮಾಜಿಕ ಒಗ್ಗಟ್ಟನ್ನು ಉಳಿಸಿ ಬೆಳೆಸುವಲ್ಲಿ ಕಲಾಯಿ ಗುತ್ತು ಧರ್ಮಚಾವಡಿಯು 200 ವರ್ಷಗಳ ಸುದೀರ್ಘ ಇತಿಹಾಸ ಹೊಂದಿದ್ದು ತನ್ನದೇ ಆದ ವಿಶಿಷ್ಟ ಕೊಡುಗೆಯನ್ನು ನೀಡುತ್ತಾ ಬಂದಿದೆ.

ಈ ಧರ್ಮಚಾವಡಿಯ ನೇತೃತ್ವವನ್ನು ವಹಿಸಿಕೊಂಡು, ಕೌಟುಂಬಿಕ ಧಾರ್ಮಿಕ ಆಚರಣೆಗಳನ್ನು ಶ್ರದ್ಧಾಭಕ್ತಿಯಿಂದ ಮುನ್ನಡೆಸುತ್ತಿರುವ ಯಜಮಾನ ಚಿದಾನಂದ ಪೂಜಾರಿ ಅವರ ನೇತೃತ್ವದಲ್ಲಿ, ಸಂಪತ್ ಬಿ.ಸುವರ್ಣ ಅವರ ಸೇವೆಯನ್ನು ಶ್ಲಾಘಿಸಿ ಈ ಗೌರವ ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಕಲಾಯ ಗುತ್ತು ಕುಟುಂಬಸ್ಥರಾದ ಉಮೇಶ್ ಪೂಜಾರಿ ಕಲಾಯ ಪ್ರಭಾಕರ ಪೂಜಾರಿ ಕಲಾಯ, ಆನಂದ ಪೂಜಾರಿ ಕಲಾಯ ,ಸುರೇಶ್ ಪೂಜಾರಿ ಕಲಾಯ, ಸುಂದರ ಪೂಜಾರಿ ಕಲಾಯ ,ಪದ್ಮ ಪೂಜಾರಿ ವೇಣೂರು, ಜನಾರ್ಧನ ಪೂಜಾರಿ ವೇಣೂರು ಹಾಗೂ ಸುಮಾರು 400 ಕುಟುಂಬಿಕರ ಸಮ್ಮುಖದಲ್ಲಿ ಈ ಗೌರವ ಅಭಿನಂದನೆ ಜರುಗಿತು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಜೀವನ ಕೌಶಲ’ ಕಾರ್ಯಾಗಾರ

Suddi Udaya

ಕರಾಯ ತ್ರಿವರ್ಣ ಸಂಗಮ ಆಟೋ ಚಾಲಕ ಮಾಲಕ ಸಂಘದ ಸಮಿತಿ ರಚನೆ: ಅಧ್ಯಕ್ಷರಾಗಿ ವೆಂಕಟೇಶ್ ಪೂಜಾರಿ ಅವಿರೋಧ ಆಯ್ಕೆ

Suddi Udaya

ಇಂದಬೆಟ್ಟು: ವಿದ್ಯುತ್ ಕಾಮಗಾರಿ ವೇಳೆ ಅವಘಡ: ಕಾರ್ಮಿಕ ಅಕ್ಬರ್ ಅಲಿ ಮೃತ್ಯು

Suddi Udaya

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ

Suddi Udaya

ಜ.25 -29: ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ

Suddi Udaya

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಿಗೆ ಷೂ ಎಸೆದ ಪ್ರಕರಣ ತನಿಖೆ ನಡೆಸಿ ಆರೋಪಿಯ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿ: ರಕ್ಷಿತ್ ಶಿವರಾಂ

Suddi Udaya
error: Content is protected !!