ಕಳೆಂಜ: ಜನನಿ ಮಹಿಳಾ ಸಂಜೀವಿನಿ ಒಕ್ಕೂಟ, ಕಳೆಂಜ ಹಾಗೂ ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಬೆಳ್ತಂಗಡಿ ಇವರ ಸಹಯೋಗದಲ್ಲಿ ಅಣಬೆ ಬೇಸಾಯ ಮತ್ತು ಮೊಟ್ಟೆ ಕೋಳಿ ಸಾಕಾಣಿಕೆ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವು ಆ.19 ರಂದು ಗ್ರಾಮ ಪಂಚಾಯತ್ ಕಳೆಂಜದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಕೃಷಿ ಅಧಿಕಾರಿ ಗಣೇಶ್, ಪ್ರಗತಿಪರ ಕೃಷಿಕ ಸುಲೈಮಾನ್ ಹಾಗೂ ಪಶು ವೈದ್ಯಾಧಿಕಾರಿ ಯತೀಶ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಅಣಬೆ ಬೇಸಾಯ, ಮೊಟ್ಟೆ ಕೋಳಿ ಸಾಕಾಣಿಕೆ, ನಿರ್ವಹಣೆ ಹಾಗೂ ಆದಾಯ ಗಳಿಸುವ ವಿಧಾನಗಳ ಕುರಿತು ತರಬೇತಿ ನೀಡಿದರು.
ಕಾರ್ಯಕ್ರಮದಲ್ಲಿ ರೈತರು ಹಾಗೂ ಮಹಿಳಾ ಸಂಘದ ಸದಸ್ಯರು ಭಾಗವಹಿಸಿದ್ದರು. ಭಾಗವಹಿಸಿದವರಿಗೆ ಬೆಳಗಿನ ತಿಂಡಿ ಹಾಗೂ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿತ್ತು.
ಜನನಿ ಮಹಿಳಾ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಕ್ರಮದ ವ್ಯವಸ್ಥೆಯಲ್ಲಿ ಸಹಕರಿಸಿದರು.












