August 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ರತ್ನಮಾನಸದಲ್ಲಿ ಆಟಿದ ಅಟಿಲ್ ಕಾರ್ಯಕ್ರಮ

ಉಜಿರೆ: ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಆಟಿದ ಅಟಿಲ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಧಾರ್ಮಿಕ ಚಿಂತಾಕರಾಗಿರುವ ವೇದಮೂರ್ತಿ ಡಾ ಶ್ರೀ ಕೃಷ್ಣ ಉಪಾಧ್ಯಾಯ ಇವರು ಮಾತನಾಡಿ ಹಿಂದಿನ ಕಾಲದಲ್ಲಿ ಜನರು ಆಟಿ ತಿಂಗಳಿಗೆ ವಿಶೇಷ ಗಮನ ಇಟ್ಟು ವಿವಿಧ ಬಗೆಯ ಸೊಪ್ಪುಗಳ ತಿನಿಸುಗಳನ್ನು ಮಾಡಿ ಆಚರಣೆ ಮಾಡುತ್ತಿದ್ದರು. ಆಟಿ ತಿಂಗಳಲ್ಲಿ ಮಾಡುವಂತಹ ಆಹಾರಗಳು ಮನುಷ್ಯನಿಗೆ ಬಹಳ ಉಪಯುಕ್ತವಾಗಿದೆ ಹಾಗೂ ಔಷಧೀಯ ಗುಣಗಳನ್ನು ಹೊಂದಿದೆ ಎಂದು ತಿಳಿಸಿದರು .ಇಂತಹ ಸಂಸ್ಕೃತಿಯನ್ನು ಬೆಳೆಸಬೇಕು ಮತ್ತು ಮುಂದಿನ ಪೀಳಿಗೆಗೆ ಕಲಿಸಬೇಕು ಎಂದು ಹೇಳಿದರು.

ಅಧ್ಯಕ್ಷೀಯ ಮಾತುಗಳನ್ನಾಡಿದ ರತ್ನಮಾನಸ ನಿಲಯದ ಪಾಲಕ ಯತೀಶ್ ಕೆ ಬಳಂಜ ಇವರು ಪೂರ್ವಜರು ತಿನ್ನುತ್ತಿದ್ದ ಆಹಾರ ಪದ್ದತಿಯನ್ನು ಇಂದಿನ ಮಕ್ಕಳು ಉಪಯೋಗಿಸಬೇಕು. ಅದರ ಬಗೆಗೆ ಮಾಹಿತಿಯನ್ನು ತಿಳಿದುಕೊಳ್ಳಬೇಕು ಹಾಗೂ ಪ್ರಕೃತಿ ಕೊಡುವಂತಹ ಆಹಾರಗಳನ್ನು ಬಳಸಿಕೊಳ್ಳಬೇಕು ಎಂದು ತಿಳಿಸಿದರು. ನಿಲಯದ ವಿದ್ಯಾರ್ಥಿ ಮಣಿ ಎಸ್ ಆರ್ ಸ್ವಾಗತಿಸಿದರು. ವಿದ್ಯಾರ್ಥಿ ಚಿರಂತ್ ಧನ್ಯವಾದ ಸಲ್ಲಿಸಿದರು. ಸುಮಾರು 21 ವಿವಿಧ ಬಗೆಯ ತಿಂಡಿ ತಿನಿಸುಗಳನ್ನು ತಯಾರಿಸಲಾಗಿರುತ್ತದೆ. ವಿದ್ಯಾರ್ಥಿಗಳು ,ಪೋಷಕರು ಮತ್ತು ಶಾಲಾ ಸಿಬ್ಬಂದಿಗಳು ಮತ್ತು ಊರ ಗಣ್ಯರು ಭಾಗವಹಿಸಿದ್ದರು ಹಾಗೂ ರತ್ನಮಾನಸ ನಿಲಯದ ಅಧ್ಯಾಪಕರಾದ ರವಿಚಂದ್ರ, ಉದಯರಾಜ್ ಹಾಗೂ ದೀಪಕ್ ಉಪಸ್ಥಿತರಿದ್ದರು .

Related posts

ಹುಣ್ಸೆಕಟ್ಟೆ ಸ.ಕಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಕರಿಯಪ್ಪ ಎ.ಕೆ ರವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ ವಿದ್ಯಾರ್ಥಿಗೆ ರಾಜ್ಯಮಟ್ಟದ ಪ್ರಶಸ್ತಿ ಪತ್ರ

Suddi Udaya

ಕಕ್ಯಪದವು: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಗೆ ಶೇ. 100 ಫಲಿತಾಂಶ

Suddi Udaya

ಶಿರ್ಲಾಲಿನಲ್ಲಿ 25ನೇ ವರ್ಷದ ಗುರುಪೂಜಾ ಕಾರ್ಯಕ್ರಮ

Suddi Udaya
error: Content is protected !!