August 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲಾಯ ಗುತ್ತು ಧರ್ಮಚಾವಡಿಯಲ್ಲಿ ಸಂಪತ್ ಬಿ. ಸುವರ್ಣರಿಗೆ ಅಭಿನಂದನೆ

ಬೆಳ್ತಂಗಡಿ: ತುಳುನಾಡಿನ ಹೆಮ್ಮೆಯ ಸಾಂಪ್ರದಾಯಿಕ ಕೌಟುಂಬಿಕ ಪರಂಪರೆ ಹಾಗೂ ಧಾರ್ಮಿಕ ಕೇಂದ್ರವಾದ ಶ್ರೀ ಕಲಾಯ ಗುತ್ತು ಧರ್ಮಚಾವಡಿಯಲ್ಲಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷರಾದ ಸಂಪತ್ ಬಿ. ಸುವರ್ಣ ಅವರಿಗೆ ಕಲಾಯಗುತ್ತಿನ ಕುಟುಂಬಸ್ಥರಿಂದ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಲಾಯಿತು.

ಕರಾವಳಿ ಭಾಗದ ಗುತ್ತಿನ ಮನೆಗಳ ಸಾಂಸ್ಕೃತಿಕ ಹಿನ್ನೆಲೆ, ದೈವಾರಾಧನೆ ಹಾಗೂ ಸಾಮಾಜಿಕ ಒಗ್ಗಟ್ಟನ್ನು ಉಳಿಸಿ ಬೆಳೆಸುವಲ್ಲಿ ಕಲಾಯಿ ಗುತ್ತು ಧರ್ಮಚಾವಡಿಯು 200 ವರ್ಷಗಳ ಸುದೀರ್ಘ ಇತಿಹಾಸ ಹೊಂದಿದ್ದು ತನ್ನದೇ ಆದ ವಿಶಿಷ್ಟ ಕೊಡುಗೆಯನ್ನು ನೀಡುತ್ತಾ ಬಂದಿದೆ.

ಈ ಧರ್ಮಚಾವಡಿಯ ನೇತೃತ್ವವನ್ನು ವಹಿಸಿಕೊಂಡು, ಕೌಟುಂಬಿಕ ಧಾರ್ಮಿಕ ಆಚರಣೆಗಳನ್ನು ಶ್ರದ್ಧಾಭಕ್ತಿಯಿಂದ ಮುನ್ನಡೆಸುತ್ತಿರುವ ಯಜಮಾನ ಚಿದಾನಂದ ಪೂಜಾರಿ ಅವರ ನೇತೃತ್ವದಲ್ಲಿ, ಸಂಪತ್ ಬಿ.ಸುವರ್ಣ ಅವರ ಸೇವೆಯನ್ನು ಶ್ಲಾಘಿಸಿ ಈ ಗೌರವ ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಕಲಾಯ ಗುತ್ತು ಕುಟುಂಬಸ್ಥರಾದ ಉಮೇಶ್ ಪೂಜಾರಿ ಕಲಾಯ ಪ್ರಭಾಕರ ಪೂಜಾರಿ ಕಲಾಯ, ಆನಂದ ಪೂಜಾರಿ ಕಲಾಯ ,ಸುರೇಶ್ ಪೂಜಾರಿ ಕಲಾಯ, ಸುಂದರ ಪೂಜಾರಿ ಕಲಾಯ ,ಪದ್ಮ ಪೂಜಾರಿ ವೇಣೂರು, ಜನಾರ್ಧನ ಪೂಜಾರಿ ವೇಣೂರು ಹಾಗೂ ಸುಮಾರು 400 ಕುಟುಂಬಿಕರ ಸಮ್ಮುಖದಲ್ಲಿ ಈ ಗೌರವ ಅಭಿನಂದನೆ ಜರುಗಿತು.

Related posts

ದಿನಕರ ಪೂಜಾರಿ ಕಡ್ತಿಲರಿಗೆ ನುಡಿನಮನ: ಹೃದಯ ಶ್ರೀಮಂತಿಕೆಯ ವ್ಯಕ್ತಿ ದಿನಕರ ಪೂಜಾರಿಯವರು: ಸಂತೋಷ್ ಕುಮಾರ್ ಕಾಪಿನಡ್ಕ

Suddi Udaya

ಗುರುವಾಯನಕೆರೆ: ಮುಸ್ತಾಕ್ ಅನುಮಾನಸ್ಪದ ಸಾವು ಪ್ರಕರಣ: ಜೊತೆಯಲ್ಲಿದ್ದ ಕಾಶಿಪಟ್ಣದ ಇಬ್ರಾಹಿಂ ಲತೀಫ್ ಬಂಧನ

Suddi Udaya

ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿಗೆ ನಿರ್ವಹಣಾ ಮೇಲ್ವಿಚಾರಕರು ಬೇಕಾಗಿದ್ದಾರೆ

Suddi Udaya

ಬುರುಡೆ ಪ್ರಕರಣದ ತನಿಖೆ ಪೂರ್ಣಗೊಂಡಿಲ್ಲ: ಗೃಹ ಸಚಿವ ಪರಮೇಶ್ವರ್

Suddi Udaya

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನ ಎನ್. ಎಸ್. ಎಸ್. ವಿದ್ಯಾರ್ಥಿ ತೇಜಸ್ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಯವರ ಜನ್ಮ ದಿನಾಚರಣೆ

Suddi Udaya
error: Content is protected !!