ಪಟ್ರಮೆ : ಸ್ಪಂದನ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟ(ರಿ ) ಪಟ್ರಮೆ . ಇದರ ವಾರ್ಷಿಕ ಮಹಾಸಭೆಯನ್ನು ಶ್ರೀಮತಿ ಶ್ರುತಿ ರವರ ಅಧ್ಯಕ್ಷತೆಯಲ್ಲಿ ಪಂಚಾಯತ್ ನಲ್ಲಿ ಆ.19ರಂದು ನಡೆಯಿತು.

ಒಕ್ಕೂಟದ ಅಧ್ಯಕ್ಷರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು . 2025-26 ನೇ ಸಾಲಿನ ಒಕ್ಕೂಟದ ವಾರ್ಷಿಕ ವರದಿಯನ್ನು ಎಮ್.ಬಿ.ಕೆ ಜಯಾ ರವರು ಓದಿ ಅದರ ಬಗ್ಗೆ ಚರ್ಚಿಸಿ ಸಭೆಯಿಂದ ಅನುಮೋದನೆ ಪಡೆಯಲಾಯಿತು. ಲೆಕ್ಕಪರಿಶೋಧನೆ ವರದಿಯನ್ನು ಪಶು ಸಖಿ ಯಶೋದಾ ಮಂಡಿಸಿ ಸಭೆಯಿಂದ ಅನುಮೋದನೆಯನ್ನು ಪಡೆಯಲಾಯಿತು.
ನಂತರ ಸ್ತನ್ಯಪಾನ ಮತ್ತು ಮಾದಕ ವ್ಯಸನದ ಬಗ್ಗೆ ಸಂಕ್ತಿಪ್ತವಾಗಿ ಮಾಹಿತಿಯನ್ನು BRP- PRI ಯಾದ ಶ್ರೀಕಲಾ ರವರು ನೀಡಿದರು.
ನಂತರ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಬಗ್ಗೆ ಸಂಕ್ತಿಪ್ತ ವರದಿ ನೀಡಿದ ಮೇಲೆ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ವಲಯ ಮೇಲ್ವಿಚಾರಕರಾದ ವೀಣಾಶ್ರೀರವರು ನಡೆಸಿಕೊಟ್ಟರು. ನೂತನ ಅಧ್ಯಕ್ಷರಾಗಿ ದೇವಕಿ ಹಾಗೂ ಕಾರ್ಯದರ್ಶಿ ಯಾಗಿ ಅಶ್ವಿನಿ ರವರನ್ನು ಆಯ್ಕೆ ಮಾಡಲಾಯಿತು. ಆರ್ಥಿಕ ಸಾಕ್ಷರತೆ ಸಮಲೋಚಕಿಯಾದ ಉಷಾ ಕಾಮತ್ ರವರು ಬ್ಯಾಂಕಿನಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಸಂಕ್ತಿಪ್ತವಾಗಿ ಮಾಹಿತಿಯನ್ನು ನೀಡಿದರು. ನಿರ್ಗಮಿತ ಒಕ್ಕೂಟದ ಅಧ್ಯಕ್ಷರಾದ ಶ್ರುತಿ ಮತ್ತು ಕಾರ್ಯದರ್ಶಿ ವಿದ್ಯಾ ಶ್ರೀ ಹಾಗೂ ನಿರ್ಗಮಿತ ಸದಸ್ಯರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು..
ಒಕ್ಕೂಟ ದ ಸಭೆಯ ಅಧ್ಯಕ್ಷೆ ಶ್ರುತಿ ರವರು ಮಾತನಾಡಿ ಒಕ್ಕೂಟ ದ ಅಧ್ಯಕ್ಷರ ಮತ್ತು ಸದಸ್ಯರ ಜವಾಬ್ದಾರಿ ಮತ್ತು ಕರ್ತವ್ಯದ ಬಗ್ಗೆ, ಹಾಗೂ ನೂತನ ಪದಾಧಿಕಾರಿಗಳು ಒಕ್ಕೂಟವನ್ನೂ ಇನ್ನೂ ಒಳ್ಳೆಯ ರೀತಿಯಲ್ಲಿ ಮುಂದುವರಿಸುವಂತೆ,ತಿಳಿಸುತ್ತಾ ಸಂಘದ ಪ್ರತಿ ಸದಸ್ಯರ ಸಹಕಾರವನ್ನು ಬಯಸಿದರು..
ಕಾರ್ಯಕ್ರಮದಲ್ಲಿ ಒಕ್ಕೂಟದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
ಒಕ್ಕೂಟದ ಸಿಬ್ಬಂದಿಗಳಾದ ನಳಿನಿ, ವಿದ್ಯಾ, ಯಶೋಧ ಪ್ರಾರ್ಥಿಸಿ. LCRP ನಳಿನಿ ಸ್ವಾಗತಿಸಿ, ವಲಯ ಮೇಲ್ವಿಚಾರಕರಾದ ವೀಣಾಶ್ರೀ NRLM ಯೋಜನೆಯ ಬಗ್ಗೆ ಪ್ರಸ್ತಾವಿಕ ನುಡಿಗಳನ್ನಾಡಿದರು. ಈ ಕಾರ್ಯಕ್ರಮವನ್ನು ಕೃಷಿ ಸಖಿ ಶ್ರೀಮತಿ ವಿನಂತಿನಿ ರವರು ನಿರೂಪಿಸಿ., LCRP ವಿದ್ಯಾ ರವರು ಧನ್ಯವಾದವಿತ್ತರು.












