August 20, 2026
ಗ್ರಾಮಾಂತರ ಸುದ್ದಿಧಾರ್ಮಿಕವರದಿ

ಆ.28: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿಯ ಸನ್ನಿಧಿಗೆ ಆಗಮಿಸುತ್ತಿರುವ ಧರ್ಮಸ್ಥಳದ ಶ್ರದ್ಧಾ ಅಮಿತ್

ಬೆಳ್ತಂಗಡಿ: ಕೊಲ್ಲಿ ಶ್ರೀ ಗಣೇಶೋತ್ಸವ ಸಮಿತಿ ಮಿತ್ತ ಬಾಗಿಲು ಕಿಲ್ಲೂರು ಇಲ್ಲಿಯ ಮಹಿಳಾ ವಿಭಾಗದ ವತಿಯಿಂದ ಬೆಳ್ಳಿ ಹಬ್ಬದ ಪ್ರಯುಕ್ತ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ಹಾಗೂ ಸೂಕ್ತ ಹವನ ಕಾರ್ಯಕ್ರಮಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿಯವರ ಪುತ್ರಿ ಶ್ರೀಮತಿ ಶ್ರದ್ಧಾ ಅಮಿತ್ ಆಗಮಿಸಲಿದ್ದಾರೆ.

ಅಷ್ಟಲಕ್ಷ್ಮಿಯರನ್ನು ಪೂಜಿಸುವ ಪುಣ್ಯ ದಿನವೇ ವರಮಹಾಲಕ್ಷ್ಮಿ ಪೂಜೆ ವರಮಹಾಲಕ್ಷ್ಮಿ ಹಬ್ಬವು ಶ್ರಾವಣ ಮಾಸದ ಹುಣ್ಣಿಮೆಯ ಮುನ್ನ ಬರುವ ಶುಕ್ರವಾರದಂದು ಆಚರಿಸಲಾಗುವ ಅತ್ಯಂತ ಶ್ರೇಷ್ಠವಾದ ಹಿಂದೂ ಹಬ್ಬವಾಗಿದ್ದು ತಾಯಿ ಲಕುಮಿಯನ್ನು ಪೂಜಿಸುವುದರಿಂದ ಕುಟುಂಬಕ್ಕೆ ಫಲ ಸಿಗುವುದು ಎಂಬ ಅಪಾರ ನಂಬಿಕೆ ಇರುವುದರಿಂದ ಅತಿ ಹೆಚ್ಚು ಮಹಿಳೆಯರು ಈ ಪೂಜೆಯಲ್ಲಿ ಭಾಗವಹಿಸುವುದರೊಂದಿಗೆ ತಾಯಿ ವರಮಹಾಲಕ್ಷ್ಮಿಯನ್ನು ಆರಾಧಿಸುತ್ತಾರೆ ಮಧ್ಯಾಹ್ನ 11:00 ಗಂಟೆಗೆ ಧಾರ್ಮಿಕ ಸಭೆ ನಡೆಯಲಿದ್ದು ಸಭೆಯ ಅಧ್ಯಕ್ಷತೆಯನ್ನು ಶ್ರೀಮತಿ ಶ್ರದ್ಧ ಅಮಿತ್ ವಹಿಸಲಿದ್ದಾರೆ.

ಧಾರ್ಮಿಕ ಪ್ರವಚನವನ್ನು ಅಶ್ವಿನಿ ಅರವಿಂದ ಹೆಬ್ಬಾರ್ ಮುಂದಾಜಿ ಇವರು ಪ್ರವಚನ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಜ, ರಕ್ಷಿತ್ ಶಿವರಾಂ ಅಧ್ಯಕ್ಷರು ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ, ಕಿರಣ್ ಚಂದ್ರ ಡಿ, ಪುಷ್ಪಗಿರಿ ಉರು ವಾಲು ಧಾರ್ಮಿಕ ಮುಖಂಡರು ಬೆಳ್ತಂಗಡಿ, ಅನಿಲ್ ಕುಮಾರ್ ಎಸ್ ಎಸ್ ಮುಖ್ಯ ಕಾರ್ಯನಿರ್ವಾಹಕ ಎಸ್ ಕೆ ಡಿ ಆರ್ ಪಿ , ದಾಸಪ್ಪ ಗೌಡ BA LLB ಕಾಂಜಾನು ನಂದಗೋಕುಲ ಆಡಳಿತ ಮೊಕ್ತೆಸರರು ಕೊಲ್ಲಿ ದೇವಸ್ಥಾನ, ಕೆ ಸತೀಶ್ ಕಾಮತ್ ಅಧ್ಯಕ್ಷರು ಜೀರ್ಣೋದ್ಧಾರ ಸಮಿತಿ ಕೊಲ್ಲಿ, ಕೆ. ಮೋಹನ್ ಬಂಗೇರ ಕಾರಿಂಜ ಅಭಿವೃದ್ಧಿ ಅಧಿಕಾರಿ ಗ್ರಾಮ ಪಂಚಾಯತ್ ಮಿತ್ತಬಾಗಿಲು, ಕೇಶವ ಪಡಕೆ ಅಧ್ಯಕ್ಷರು ಸಾರ್ವಜನಿಕ ಗಣೇಶೋತ್ಸವ ಸಮಿತಿ ಕೊಲ್ಲಿ, ವನಿತಾ ಉಮೇಶ್ ಅಧ್ಯಕ್ಷರು ಮಹಿಳಾ ವಿಭಾಗ ಸಮಿತಿ ಕೊಲ್ಲಿ ಭಾಗವಹಿಸಲಿದ್ದಾರೆ. (ವರದಿ: ರತ್ನಕರ್ ಬಿ. ನನಸು ನಾವೂರು)

Related posts

 ಜು. 4 : ವೇಣೂರಿನಲ್ಲಿ ಯಕ್ಷಗಾನ ತರಗತಿ ಆರಂಭ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬೆಳ್ತಂಗಡಿ ಸ.ಮಾ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಊಟದ ತಟ್ಟೆ ವಿತರಣೆ

Suddi Udaya

ಮುಳಿಯ ಗೋಲ್ಡ್ & ಡೈಮಂಡ್ಸ್‌ನಿಂದ ‘ಮಾನ್ಸೂನ್ ಸೇಲ್’ – ಚಿನ್ನದ ಆಭರಣಗಳು 0%, VA/ಮೇಕಿಂಗ್ ನಲ್ಲಿ 100% ರಿಯಾಯಿತಿ

Suddi Udaya

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಕೆ. ಗಂಗಾಧರ ಗೌಡ

Suddi Udaya

ಫೆ.13-22: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!