28.7 C
ಪುತ್ತೂರು, ಬೆಳ್ತಂಗಡಿ
August 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ನಶಾಮುಕ್ತ ಭಾರತ ಅಭಿಯಾನ ಕಾರ್ಯಕ್ರಮ

ಕಕ್ಯಪದವು: ಎಲ್.ಸಿ.ಆರ್ ವಿದ್ಯಾ ಸಂಸ್ಥೆಯಲ್ಲಿ ನಶಾಮುಕ್ತ ಭಾರತ ಅಭಿಯಾನ ಮತ್ತು ಮಿಷನ್ ಸ್ಪಂದನದ ಅಂಗವಾಗಿ “10 ಕೋಟಿ ನಶಾಮುಕ್ತ ಪ್ರತಿಜ್ಞೆಗಳ ಮಹಾ ಅಭಿಯಾನ” ನಶಾಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ ನಶಾಮುಕ್ತ ಭಾರತ ಅಭಿಯಾನ ಹಾಗೂ ಮಿಷನ್ ಸ್ಪಂದನದ ಅಂಗವಾಗಿ ಈಶ್ವರಿ ವಿಶ್ವವಿದ್ಯಾನಿಲಯದ ಮೆಡಿಕಲ್ ವಿಂಗ್, ರಾಜಯೋಗ ಎಜುಕೇಷನ್ ಮತ್ತು ರೀಸಚ್೯ ಫೌಂಡೇಶನ್ ಬ್ರಹ್ಮಾಕುಮಾರೀಸ್, ಶಿವಸನ್ನಿಧಿ ,ಕಾವಲಕಟ್ಟೆ ಇವರ ಆಯೋಜನೆಯಲ್ಲಿ ಎಲ್.ಸಿ.ಆರ್‌ ವಿದ್ಯಾಸಂಸ್ಥೆಗಳು ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹಯೋಗದಲ್ಲಿ ನಶಾಮುಕ್ತ ಪ್ರತಿಜ್ಞಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ದೇಶಾದ್ಯಂತ ದಾದಿ ಪ್ರಕಾಶಮಣಿಜೀ ಅವರ ಪವಿತ್ರ ಸ್ಮರಣೆಯಲ್ಲಿ 10 ಕೋಟಿ ಜನರಿಂದ ನಶಾಮುಕ್ತ ಜೀವನದ ಪ್ರತಿಜ್ಞೆ ಸ್ವೀಕರಿಸುವ ಮಹತ್ವದ ಗುರಿಯನ್ನು ಹೊಂದಿ, ರಾಜಯೋಗಿನಿ ಬ್ರಹ್ಮಕುಮಾರಿ ಸರೋಜಿನಿ, ಸಂಚಾಲಕರು ಪ್ರಜಾಪಿತಾ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಕಾವಳಕಟ್ಟೆ ಶಾಖೆ ,ಇವರು ಭಾಗವಹಿಸಿ ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಭಾಗವಹಿಸಿ, ಮಾದಕ ವಸ್ತುಗಳು, ತಂಬಾಕು, ಮದ್ಯಪಾನ ಸೇರಿದಂತೆ ಯಾವುದೇ ರೀತಿಯ ವ್ಯಸನಗಳಿಂದ ದೂರವಿದ್ದು ಆರೋಗ್ಯಕರ ಹಾಗೂ ಜವಾಬ್ದಾರಿಯುತ ಜೀವನ ನಡೆಸುವ ಸಂಕಲ್ಪ ಮಾಡಿದರು.
ಈ ಸಂದರ್ಭದಲ್ಲಿ ವ್ಯಸನದ ದುಷ್ಪರಿಣಾಮಗಳು, ವಿದ್ಯಾರ್ಥಿಗಳ ಮೇಲೆ ಅದರ ಪರಿಣಾಮ ಹಾಗೂ ಸಮಾಜವನ್ನು ನಶಾಮುಕ್ತಗೊಳಿಸುವಲ್ಲಿ ಯುವಜನರ ಪಾತ್ರದ ಕುರಿತು ಜಾಗೃತಿ ಮೂಡಿಸಲಾಯಿತು. ಪ್ರತಿಯೊಬ್ಬರೂ ತಮ್ಮ ಕುಟುಂಬ ಹಾಗೂ ಸ್ನೇಹಿತರಲ್ಲಿಯೂ ನಶಾಮುಕ್ತ ಜೀವನದ ಸಂದೇಶವನ್ನು ಹರಡುವಂತೆ ಪ್ರೇರೇಪಿಸಲಾಯಿತು.


ಸಹಶಿಕ್ಷಕರಾದ ಪ್ರಶಾಂತ್ ಕಾರ್ಯಕ್ರಮ ನಿರೂಪಿಸಿ ,ಸ್ವಾಗತಿಸಿ ವಂದಿಸಿದರು.

Related posts

ಶುಭವಿವಾಹ:ಗಿರೀಶ್ ಬಿ.ಕೆ ಮತ್ತು ಧನ್ಯಶ್ರೀ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯ ಜಮಾಅತ್ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಜೂನಿಯರ್ ರೆಡ್ ಕ್ರಾಸ್ ನಿಂದ ಕಾರ್ಗಿಲ್ ವಿಜಯ್ ದಿವಸ ಆಚರಣೆ

Suddi Udaya

ಭಜನೆ, ಭಜಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿಂದನೆ
ಆರೋಪ: ಆರೋಪಿಯ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

Suddi Udaya

ಲಾಯಿಲ ಗುರಿಂಗಾನದಲ್ಲಿ ಗುಡ್ಡದಲ್ಲಿ ಭಾರಿ ಬೆಂಕಿ ಅನಾಹುತ:

Suddi Udaya

ಮಧ್ಯಾಂತರ ಸಮ್ಮೇಳನದಲ್ಲಿ ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ‘ಎಕ್ಸೆಲೆನ್ಸ್ ಅವಾರ್ಡ್’ ಹಾಗೂ ‘ಗೋಲ್ಡನ್ ಸ್ಟಾರ್ ಪ್ರೆಸಿಡೆಂಟ್’ ಪ್ರಶಸ್ತಿ

Suddi Udaya
error: Content is protected !!