25.6 C
ಪುತ್ತೂರು, ಬೆಳ್ತಂಗಡಿ
August 20, 2026
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ದಿನಸಿ ಅಂಗಡಿ ಬೆಂಕಿಗಾಹುತಿ

ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಬೆಂದ್ರಾಳದಲ್ಲಿ ಬುಧವಾರ ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ ನಿಂದ ದಿನಸಿ ಅಂಗಡಿಯೊಂದು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ನಡೆದಿದೆ.

ಬೆಂದ್ರಾಳ ನಿವಾಸಿ ಶರೀಫ್ ಅವರ ಮಾಲಕತ್ವದ ದಿನಸಿ ಅಂಗಡಿಯಲ್ಲಿ ತಡರಾತ್ರಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಅಂಗಡಿ ಹಾಗೂ ಕಟ್ಟಡವನ್ನು ಆವರಿಸಿದೆ. ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ, ಪರಸ್ಪರ ಸಹಕಾರದೊಂದಿಗೆ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಇದರಿಂದ ಬೆಂಕಿ ಮತ್ತಷ್ಟು ವ್ಯಾಪಿಸುವುದನ್ನು ತಡೆಯಲಾಯಿತು. ಆದರೆ ಬೆಂಕಿಯ ತೀವ್ರತೆಗೆ ಅಂಗಡಿಯಲ್ಲಿದ್ದ ಸಂಪೂರ್ಣ ದಿನಸಿ ಸಾಮಗ್ರಿಗಳು, ಕಟ್ಟಡ ಹಾಗೂ ಸುಮಾರು 1 ಲಕ್ಷ ರೂ. ನಗದು ಬೆಂಕಿಗಾಹುತಿಯಾಗಿವೆ. ಘಟನೆಯಿಂದ 5 ಲಕ್ಷ ರೂ.ಗಳಿಗೂ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಘಟನೆಯ ಮಾಹಿತಿ ತಿಳಿದು ಗ್ರಾಮ ಪಂಚಾಯಿತಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾರ್ಟ್ ಸರ್ಕ್ಯೂಟ್‌ ನಿಂದಲೇ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಘಟನೆಯ ಕುರಿತು ಹೆಚ್ಚಿನ ಪರಿಶೀಲನೆ ನಡೆಯುತ್ತಿದೆ.

Related posts

ಬೆಳ್ತಂಗಡಿ ಚರ್ಚ್ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಬೆಳಾಲು: ಶ್ರೀ ಧ. ಮಂ. ಪ್ರೌ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕನ್ಯಾಡಿ ಕಾರ್ಯಕ್ಷೇತ್ರದಲ್ಲಿ ದೀಪಶ್ರೀ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಗೆ ದಶಕದ ಸಂಭ್ರಮ: ಕೇಕ್ ಕತ್ತರಿಸಿ ಸಂಭ್ರಮಾಚರಣೆ

Suddi Udaya

ನಾವೂರು ಸರಕಾರಿ ಪ್ರೌಢಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಫುಟ್ಬಾಲ್ ಪಂದ್ಯಾಟ: ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!