28.7 C
ಪುತ್ತೂರು, ಬೆಳ್ತಂಗಡಿ
August 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು : ಮಾದಕ ವಸ್ತು ಸೇವನೆಯ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಅಮಲಿನಲ್ಲಿ ತೇಲಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪುಂಜಾಲಕಟ್ಟೆ ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ರಾಜೇಶ್ ಕೆ.ವಿ. ಅವರು ಸಿಬ್ಬಂದಿಯೊಂದಿಗೆ ಆಗಸ್ಟ್ 19ರಂದು ಮಧ್ಯಾಹ್ನ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದ ಮಡಂತ್ಯಾರು ಪೇಟೆ ಬಳಿ ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೊಬ್ಬರು ಅಮಲಿನಲ್ಲಿ ತೇಲಾಡುತ್ತಿರುವುದನ್ನು ಗಮನಿಸಿದ ಪೊಲೀಸರು ಆತನನ್ನು ವಿಚಾರಿಸಿದಾಗ, ನಿಷೇಧಿತ ಮಾದಕ ವಸ್ತು ಸೇವಿಸಿರುವುದಾಗಿ ಒಪ್ಪಿಕೊಂಡಿದ್ದಾನೆ. ವಿಚಾರಣೆ ವೇಳೆ ಆತನನ್ನು ಪುತ್ತಿಲ ಗ್ರಾಮದ ಅಬ್ದುಲ್ ಸಲೀಂ(34) ಎಂದು ಗುರುತಿಸಲಾಗಿದೆ.

ನಂತರ ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ. ಈ ಸಂಬಂಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಪರಾಧ NDPS ಕಾಯ್ದೆಯ ಕಲಂ 27(b), 22 ಮತ್ತು 20(b)(ii)(A) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಜೂನಿಯರ್ ಅಥ್ಲೆಟಿಕ್ಸ್ ರಿಲೇ ರೇಸ್: ಕಲ್ಲೇರಿಯ ಯತಿನ್ ನಾಯ್ಕ್ ರಿಗೆ ಚಿನ್ನದ ಪದಕ

Suddi Udaya

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಬೆಳ್ತಂಗಡಿ ಠಾಣೆಗೆ ಮದನ್ ಬುಗುಡಿ ಹಾಜರು

Suddi Udaya

ಮಾಯಿಲ ಕೋಟೆ ಸೀಮೆ ದೈವಸ್ಥಾನದಲ್ಲಿ ಸಂಕ್ರಮಣ ಪೂಜೆ ಹಾಗೂ ಕಲ್ಲುರ್ಟಿ ಅಗೇಲು ಸೇವೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯಿಂದ ತಾಲೂಕಿನ ಸಾಧಕ ಮಹಿಳೆಯರಿಗೆ ಪಂಚರತ್ನ ಪ್ರಶಸ್ತಿ ಪುರಸ್ಕಾರ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರ ಅವರಿಗೆ ಅಂತಿಮ ನಮನ ಸಲ್ಲಿಸಿದ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಯು.ಸಿ ಪೌಲೋಸ್ ಹಾಗೂ ಕಲ್ಲಡ್ಕ ಪ್ರಭಾಕರ ಭಟ್

Suddi Udaya
error: Content is protected !!