ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಅ.19 ರoದು 187ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಗುರುವಾಯನಕೆರೆ ಛಾಯಾಭವನದಲ್ಲಿ ಆಚರಿಸಲಾಯಿತು ಇದರ ಪ್ರಯುಕ್ತ ಬೆಳ್ತಂಗಡಿ ವಲಯದ ಮಾಜಿ ಅಧ್ಯಕ್ಷ ಅಶೋಕ್ ಆಚಾರ್ಯ ಪುಣ್ಯ ಸ್ಟುಡಿಯೋ ನಾವೂರ ಇವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಲಯದ ಅಧ್ಯಕ್ಷ ರವಿ ಪೂಜಾರಿ ನಾರಾವಿ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಸಾoಸ್ಕ್ರತಿಕ ಕಾರ್ಯದರ್ಶಿ ಸುರೇಶ್ ಬಿ ಕೌಡoಗೆ, ವಲಯದ ಸ್ಥಾಪಕಾಧ್ಯಕ್ಷ ಪಾಲಾಕ್ಷ ಪಿ ಸುವರ್ಣ, ಗೌರವಾಧ್ಯಕ್ಷ ವಿಲ್ಸನ್ ಗೋನ್ಸಾಲಿಸ್, ಪ್ರಧಾನ ಕಾರ್ಯದರ್ಶಿ ದಾಮೋದರ್ ಕುಲಾಲ್, ಉಪಾಧ್ಯಕ್ಷರಾದ ಉಮೇಶ್ ಕುಲಾಲ್, ಕೋಶಾಧಿಕಾರಿ ಸುಜಿತ್ ರೈ ಉಪಸ್ಥಿತರಿದ್ದರು.
ಪಾಲಾಕ್ಷ ಪಿ ಸುವರ್ಣ, ಕೆ ವಸoತ್ ಶರ್ಮಾ ಹಾಗೂ ವಿಲ್ಸನ್ ಗೋನ್ಸಾಲಿಸ್ ವಿಶ್ವ ಛಾಯಾಗ್ರಹಣ ದಿನಾಚರಣೆ ಬಗ್ಗೆ ಮಾತನಾಡಿದರು. ಗಣೇಶ್ ಹೆಗ್ಡೆ ಸನ್ಮಾನ ಪತ್ರ ಓದಿದರು. ದಾಮೋದರ್ ಸ್ವಾಗತಿಸಿ, ಉಮೇಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಸುಜಿತ್ ರೈ ಧನ್ಯವಾದ ನೀಡಿದರು.












