28.7 C
ಪುತ್ತೂರು, ಬೆಳ್ತಂಗಡಿ
August 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅನ್ನಭಾಗ್ಯ ಯೋಜನೆಗೆ ಕಳಪೆ ಅಕ್ಕಿ ಪೂರೈಕೆ ಬೆನ್ನಲ್ಲೇ ಬೆಳ್ತಂಗಡಿ ಆಹಾರ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

ಬೆಳ್ತಂಗಡಿ: ಸರಕಾರ ಅನ್ನಭಾಗ್ಯ ಯೋಜನೆಯ ಮೂಲಕ ಬಡವರ ಹಸಿವು ನೀಗಿಸಬೇಕೆಂಬ ಮಹತ್ವಾಕಾಂಕ್ಷೆಯಿಂದ ಪ್ರತಿ ತಿಂಗಳು ಪಡಿತರ ವಿತರಣೆಯನ್ನು ಮಾಡುವ ಅಕ್ಕಿಯು ಕಳಪೆ ಗುಣಮಟ್ಟದಲ್ಲಿ ಪತ್ತೆಯಾಗಿದ್ದು ಸ್ಥಳಕ್ಕೆ ಬೆಳ್ತಂಗಡಿ ಆಹಾರ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮಹಜರು ನಡೆಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ನಿಡ್ಲೆ, ಪಟ್ರಮೆ ಲೈನಿಗೆ ಆಗಸ್ಟ್ 19ರಂದು ಬೆಳಗ್ಗೆ ಲಾರಿ ಪೂರ್ತಿ ಪಡಿತರ ಅಕ್ಕಿ ಬಂದಿದ್ದು ನಿಡ್ಲೆ ಪಡಿತರ ಕೇಂದ್ರದಲ್ಲಿ ಅಂದಾಜು 50 ರಿಂದ 100 ಗೋಣಿ ಅಕ್ಕಿಯನ್ನು ಅನ್‌ಲೋಡ್ ಮಾಡಿ ತೆರಳಿದ್ದಾರೆ. ನಿಡ್ಲೆ ನ್ಯಾಯಬೆಲೆ ಅಂಗಡಿ ವ್ಯಾಪ್ತಿಯ ನಾಗರಿಕರು ಅಕ್ಕಿ ಬಂದ ಖುಷಿಯಲ್ಲಿ ಸ್ಥಳಕ್ಕೆ ಬಂದು ನೋಡಿದಾಗ ಅವರಿಗೆ ಶಾಕ್ ಕಾದಿತ್ತು. ಎರಡು ವರ್ಷಗಳ ಹಿಂದೆ ಅಂದರೆ ೨೦೨೪-೨೫ ರಲ್ಲಿ ಪ್ಯಾಕ್ ಮಾಡಲಾದ ಗೋಣಿಯನ್ನು ತೆರೆದು ನೋಡಿದಾಗ ಅಕ್ಕಿ ಸಂಪೂರ್ಣವಾಗಿ ಹಾಳಾಗಿ ಅದರಲ್ಲಿ ಹುಳ ಆಗಿರುವುದು ಕಂಡು ಬಂದಿತ್ತು. ಸ್ಥಳೀಯರು ಹೇಳುವ ಪ್ರಕಾರ ಈ ಅಕ್ಕಿಯನ್ನು ಪ್ರಾಣಿಗಳಿಗೆ ನೀಡಲು ಕೂಡಾ ಯೋಗ್ಯವಾಗಿಲ್ಲ ಅಷ್ಟು ಕೆಟ್ಟು ಹೋಗಿದೆ.

ಬೆಳ್ತಂಗಡಿ ಆಹಾರ ಇಲಾಖೆ ಆಹಾರ ಶಿರಸ್ತೆದಾರ್ ಸಂತೋಷ್ ಮತ್ತು ಆಹಾರ ನಿರೀಕ್ಷಕರು ವಿಶ್ವ.ಕೆ ಆ.20 ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಮಂಗಳೂರು (FCI) ಭಾರತೀಯ ಆಹಾರ ನಿಗಮ ಗೋಡೌನಿಂದ ಬಂದ ಅಕ್ಕಿಗಳ ಲೋಡಿನಲ್ಲಿ 6 ಗೋಣಿಯಲ್ಲಿ ಕಳಪೆ ಗುಣಮಟ್ಟದ ಅಕ್ಕಿ ಪತ್ತೆಯಾಗಿದೆ. ಈ ಅಕ್ಕಿಯನ್ನು ವಿತರಿಸದಂತೆ ಸೂಚನೆ ನೀಡಿದ ಅಧಿಕಾರಿಗಳು. ಈ ಬಗ್ಗೆ ಮಹಜರು ಮಾಡಿ ಮಂಗಳೂರು ಆಹಾರ ನಾಗರಿಕರ ಸರಬರಾಜು ಇಲಾಖೆಯ ಉಪ ನಿರ್ದೇಶಕರು ಹೇಮಲತಾ ಅವರಿಗೆ ವರದಿ ಸಲ್ಲಿಸಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

Related posts

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶದಲ್ಲಿ ಲೋಪವಾಗಿಲ್ಲ: ರಾಜ್ಯ ಸರಕಾರ ಸಮರ್ಥನೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ನೀರು ನೈರ್ಮಲ್ಯ ಸ್ವಚ್ಛ ಗ್ರಾಮ ಚಿತ್ರ ಪ್ರದರ್ಶನ ಮತ್ತು ಮಾಹಿತಿ ಕಾರ್ಯಾಗಾರ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ. 229.69 ಕೋಟಿ ವ್ಯವಹಾರ, ರೂ.1.03 ಕೋಟಿ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಟ್

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಪ.ಪೂ. ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

Suddi Udaya

ಉಮೇಶ್ ಮದ್ದಡ್ಕ ರವರಿಗೆ ಛಾಯಾರತ್ನ ಪ್ರಶಸ್ತಿ

Suddi Udaya

ಬೆಳ್ತಂಗಡಿ : ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

Suddi Udaya
error: Content is protected !!