29.9 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

ಉಜಿರೆ : ಇಲ್ಲಿನ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಕಲಾವಿಭಾಗದ ವ್ಯುತ್ಪತ್ತಿ ಸಂಘದ ವತಿಯಿಂದ ಸದ್ಭಾವನಾ ದಿನಾಚರಣೆ ಯನ್ನು ಸರ್ವಧರ್ಮ ಗಳ ಪ್ರಾರ್ಥನೆ ಹಾಗೂ ಸಂದೇಶಗಳನ್ನು ವಿದ್ಯಾರ್ಥಿಗಳೇ ಪಟಿಸಿ, ಅನುವಾದಿಸಿ ವಿನೂತನವಾಗಿ ಆಚರಿಸಿದರು.

ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ ಇವರು ವಿದ್ಯಾರ್ಥಿಗಳಿಗೆ ಸದ್ಭಾವನಾ ಪ್ರತಿಜ್ಞೆಯನ್ನು ಭೋಧಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ, ಪ್ರತಿವರ್ಷ ಆ. 20 ರಂದು ಭಾರತದಲ್ಲಿ ಸದ್ಭಾವನಾ ದಿವಸ್ ಅಥವಾ ಸಾಮರಸ್ಯ ದಿನವನ್ನು ಆಚರಿಸಲಾಗುತ್ತದೆ. ಇದು ದೇಶದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನವಾಗಿದೆ. ಜಾತಿ, ಧರ್ಮ, ಭಾಷೆ ಅಥವಾ ಪ್ರದೇಶಗಳ ಭೇದವಿಲ್ಲದೆ ಎಲ್ಲ ಜನರ ನಡುವೆ ಶಾಂತಿ, ರಾಷ್ಟ್ರೀಯ ಏಕತೆ, ಪ್ರೀತಿ ಮತ್ತು ಸದ್ಭಾವನೆಯನ್ನು ಉತ್ತೇಜಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ. ಹಾಗೂ ವಿದ್ಯಾರ್ಥಿಗಳು ತಮ್ಮ ಜಾತಿ ,ಮತ ,ಭಾಷೆಗಳ ಭೇದಗಳಿದ್ದರೂ ಸ್ನೇಹ ಹಾಗೂ ಸೌಹಾರ್ಧತೆಗಳ ಮೂಲಕ ಒಂದಾಗಿ ಬದುಕಬೇಕು ಎಂಬ ಸಂದೇಶ ನೀಡಿದರು.


ಈ ಸಂಧರ್ಭದಲ್ಲಿ ವಿದ್ಯಾರ್ಥಿಗಳಾದ ಸ್ಮೃತಿ ಹಿಂದೂ ಧರ್ಮದ, ನಿಶಾನ ಇಸ್ಲಾಮ್ ಧರ್ಮದ , ಶ್ರೇಯ ಮರಿಯಾ ಕ್ರೈಸ್ತ ಧರ್ಮದ, ರಾಜ್ ಇಂದ್ರ ಜೈನ ಧರ್ಮದ ಹಾಗೂ ಮನೋಜ್ ಎಂ ಬೌದ್ಧ ಧರ್ಮದ ಸಾಮರಸ್ಯದ ಸಂದೇಶ ಸಾರಿದರು.
ವಿದ್ಯಾರ್ಥಿನಿ ಪ್ರಾರ್ಥನಾ ಸ್ವಾಗತಿಸಿ, ತುಳಸಿ ವಂದಿಸಿದರು ,ಸ್ಪೂರ್ತಿ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರಾದ ದಿವ್ಯಾ ಕುಮಾರಿ, ಶ್ಯಾಮಿಲಾ ಹಾಗೂ ಪ್ರೇಕ್ಷಿತಾ ಸಹಕರಿಸಿದರು.

Related posts

ಕಾರಿನಲ್ಲಿ ನಿಷೇಧಿತ MDMA ಮಾದಕವಸ್ತು ಸಾಗಾಟ: ವೇಣೂರು ಪೊಲೀಸರಿಂದ ಇಬ್ಬರು ಆರೋಪಿಗಳ ಬಂಧನ

Suddi Udaya

ಖ್ಯಾತ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ರವರ ನಿಧನಕ್ಕೆ ಮಾಜಿ ಶಾಸಕ ಕೆ. ವಸಂತ ಬಂಗೇರ ಸಂತಾಪ

Suddi Udaya

ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸೆಗಳ ಮಹಾವಿದ್ಯಾಲಯ ಹಾಗೂ ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ಉಚಿತ ಯೋಗ ಶಿಬಿರ

Suddi Udaya

ಜು.11:ಬೆಳ್ತಂಗಡಿ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್

Suddi Udaya

ಧರ್ಮಸ್ಥಳದಲ್ಲಿ ಎಸ್.ಡಿ.ಎಮ್. ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಸಮಾವೇಶ

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಕ್ಷಗಾನ ಸೆಮಿ ಕ್ಲಾಸಿಕಲ್ ನಾಟಕ ಪಾಶ್ಚಾತ್ಯ ನೃತ್ಯ ತರಬೇತಿಗಳ ಉದ್ಘಾಟನೆ

Suddi Udaya
error: Content is protected !!