27.9 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಪರಿಸರದಲ್ಲಿ ಎರಡು ದಿನಗಳಲ್ಲಿ 4 ಕಾಡಂದಿಗಳ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ; ಮಿದುಳು ಜ್ವರದಿಂದ ಸಾವು ಸ್ಥಳೀಯರ ಶಂಕೆ

ನಡ: ನಡ ಗ್ರಾಮದ ಪರಿಸರದಲ್ಲಿ ಕಳೆದ ಎರಡು ದಿನಗಳಲ್ಲಿ ನಾಲ್ಕು ಕಾಡು ಹಂದಿಗಳು ಸಾವನ್ನಪ್ಪಿರುವುದು ಕಂಡು ಬಂದಿದ್ದು, ಕಾಡು ಹಂದಿಗಳು ಮಿದುಳು ಜ್ವರದಿಂದ ಸಾವನ್ನಪ್ಪಿರಬಹುದೆಂಬ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.

ನಡ ಗ್ರಾಮದ ಪ್ರೌಢ ಶಾಲಾ ಬಳಿ ಕಾಡಿನಲ್ಲಿ ನಿನ್ನೆ ಆ.20ರಂದು ಎರಡು ಕಾಡುಹಂದಿಗಳ ಶವ ಪತ್ತೆಯಾಗಿದೆ. ಎರಡು ಶವಗಳು ಸಂಪೂರ್ಣವಾಗಿ ಕೊಳೆತು ಹೋಗಿತ್ತು. ಸ್ಥಳೀಯರು ಇದನ್ನು ದಫನ ಮಾಡಿದ್ದರು. ಆ.21 ಇಂದು ನಡ ಗ್ರಾಮದ ಕರ್ಮಿಲೆಟ್ ಗೋವಿಯಸ್ ಇವರ ರಬ್ಬರ ತೋಟದಲ್ಲಿ ಎರಡು ಕಾಡಿನ ಹಂದಿಗಳು ಸತ್ತು ಬಿದ್ದಿರುವುದು ಪತ್ತೆಯಾಗಿದೆ ಎಂದು ಸ್ಥಳೀಯ ಗಣ್ಯರಾದ ಶ್ಯಾಮಸುಂದರ್ ನಡ ತಿಳಿಸಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ ಹಾಗೂ ಆರೋಗ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಕುದುರೆಮುಖ ರಕ್ಷಿತಾರಣ್ಯದಿಂದ ಕಾಡಾಂದಿಗಳು ಈ ಪ್ರದೇಶಕ್ಕೆ ಬರುತ್ತಿದ್ದು, ಹಂದಿಗಳು ಯಾವುದಾದರೂ ಕಾಯಿಲೆಯಿಂದ ಮೃತಪಟ್ಟಿರಬಹುದೇ ಅಥವಾ ಕಿಡಿಗೇಡಿಗಳು ಇಟ್ಟ ವಿಷದಿಂದ ಈ ರೀತಿ ಆಗಿರಬಹುದೇ ಎಂಬುದು ಇನ್ನಷ್ಟೇ ತಿಳಿದು ಬರಬೇಕಾಗಿದೆ. ಕಾಡು ಹಂದಿಗಳ ತಲೆಯ ಭಾಗ ಕೊಳೆತು ಹೋಗಿರುವುದರಿಂದ ಮಿದುಳು ಜ್ವರದಿಂದ ಸಾವನ್ನಪ್ಪಿರಬಹುದೆಂಬ ಶಂಕೆ ಸ್ಥಳೀಯವಾಗಿ ವ್ಯಕ್ತವಾಗುತ್ತಿದೆ.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya

ಶಿರಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ನಾವೂರು: ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ ಸ್ವಚ್ಚತಾ ಆಂದೋಲನ

Suddi Udaya

ಮತದಾರರ ಪಟ್ಟಿಯಲ್ಲಿ ಎಡವಟ್ಟು: ಮುಂಡಾಜೆಯ ಅಶ್ವಿನಿ ಎ. ಹೆಬ್ಬಾರ್ ಬಂಟ್ವಾಳ ಆಡಳಿತ ಸೌಧದಲ್ಲಿ ಮತದಾನ

Suddi Udaya

ಮಡಂತ್ಯಾರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಪ್ರಮೋದ್ ಕುಮಾರ್

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಶ್ರೀ.ಧ.ಮಂ. ಶಿಕ್ಷಣ ಸಂಸ್ಥೆಗಳು ಹಾಗೂ ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!