29.9 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ಶನಿವಾರ ಪೂರ್ಣ ತರಗತಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆಯ ತೀವ್ರತೆಯಿಂದಾಗಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಘೋಷಿಸಲಾಗಿದ್ದ ಮಳೆ ರಜೆ ದಿನಗಳ ಬೋಧನಾ ಅವಧಿಯನ್ನು ಸರಿದೂಗಿಸಲು ಶಾಲಾ ಶಿಕ್ಷಣ ಇಲಾಖೆಯು ಮಹತ್ವದ ಆದೇಶ ಹೊರಡಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯ ಕಾರಣ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆ ಗಳಿಗೆ ರಜೆಗಳನ್ನು ಘೋಷಿಸಿರುತ್ತಾರೆ. ಈವರೆಗೆ ಮಂಗಳೂರು ಉತ್ತರ, ಮಂಗಳೂರು ದಕ್ಷಿಣ, ಬಂಟ್ವಾಳ ಮತ್ತು ಮೂಡಬಿದ್ರೆ ತಾಲೂಕುಗಳಿಗೆ ಒಟ್ಟು ಎಂಟು ಪೂರ್ಣ ದಿನಗಳು ಮತ್ತು ಒಂದು ಅರ್ಧ ದಿನದ ರಜೆಯನ್ನು ಘೋಷಿಸಲಾಗಿರುತ್ತದೆ ಮತ್ತು ಬೆಳ್ತಂಗಡಿ, ಪುತ್ತೂರು ಮತ್ತು ಸುಳ್ಯ ವಲಯಗಳಿಗೆ ಒಟ್ಟು ಒಂಭತ್ತು ಪೂರ್ಣ ದಿನಗಳ ರಜೆಗಳನ್ನು ಘೋಷಿಸಲಾಗಿರುತ್ತದೆ. ಈ ರಜಾ ದಿನಗಳಲ್ಲಿ ಕೊರತೆಯಾಗಿರುವ ಬೋಧನಾ ಅವಧಿಗಳನ್ನು ಸರಿದೂಗಿಸಲು ಅಗಸ್ಟ್ ತಿಂಗಳ ಮೂರನೇ ವಾರದಿಂದ ಆರಂಭವಾಗಿ ಶನಿವಾರ ಅಪರಾಹ್ನ ಪೂರ್ಣ ತರಗತಿಗಳನ್ನು ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಇತರೆ ದಿನಗಳಲ್ಲಿ ಹೆಚ್ಚುವರಿಯಾಗಿ ಸಂಜೆ ಅವಧಿಯಲ್ಲಿ ಒಂದು ಬೋಧನಾ ಅವಧಿ ನಡೆಸಲು ಸೂಚಿಸಿದೆ.


ಪ್ರತಿ ಶಾಲೆಯಲ್ಲಿ ಮಳೆ ರಜೆ ಲೆಕ್ಕಾಚಾರವನ್ನು ಇಟ್ಟು ಹೊಂದಾಣಿಕೆ ಮಾಡಿಕೊಳ್ಳುವ ಅವಧಿಗಳನ್ನು ಲೆಕ್ಕಾಚಾರ ಮಾಡಿ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಮತ್ತು ಎಸ್‌ಡಿಎಂಸಿ ಅವರೊಂದಿಗೆ ಚರ್ಚಿಸಿ ದಿನಗಳನ್ನು ನಿರ್ಧರಿಸಿ ವೇಳಾಪಟ್ಟಿಯಲ್ಲಿ ದಾಖಲಿಸಿ ಶೈಕ್ಷಣಿಕ ಮಾರ್ಗಸೂಚಿಯಂತೆ ಬೋಧನಾ ದಿನಗಳನ್ನು ಸರಿದೂಗಿಸಲುಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ.

Related posts

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ

Suddi Udaya

ಶಟ್ಲ್ ಬ್ಯಾಡ್ಮಿಂಟನ್ ಶಿವ ಮತ್ತು ಮುನೀರ್ ಮಾಲೀಕತ್ವದ ಎಸ್ಎಂ ಸ್ಮಶರ್ಸ್ ತಂಡ ವಿನ್ನರ್

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕನ್ಯಾಡಿ ಕಾರ್ಯಕ್ಷೇತ್ರದಲ್ಲಿ ದೀಪಶ್ರೀ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

Suddi Udaya

ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಘಟಕಗಳಿಗೆ ಭೇಟಿ

Suddi Udaya
error: Content is protected !!