29.9 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾಲಕಿಯ ಮೇಲೆ ಅತ್ಯಾಚಾರ : ವೇಣೂರಿನ ರಿಕ್ಷಾ ಚಾಲಕ ಜಮಾಲುದ್ದೀನ್ ಬಂಧನ

ಬೆಳ್ತಂಗಡಿ: ಪೋಕ್ಸೋ ಕಾಯ್ದೆಯಡಿ ರಿಕ್ಷಾ ಚಾಲಕನನ್ನು ವೇಣೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತ ಪ್ರಾಯದ ಸಂತ್ರಸ್ಥ ಬಾಲಕಿ (14) ಕೆಲವು ತಿಂಗಳುಗಳಿಂದ ವೇಣೂರು ನಿವಾಸಿ ಜಮಾಲುದ್ದೀನ್ ಎಂಬಾತನ ರಿಕ್ಷಾದಲ್ಲಿ ಶಾಲೆಗೆ ಹೋಗಿ ಬರುತ್ತಿದ್ದಳು. ಈ ವೇಳೆ ಜಮಾಲುದ್ದೀನ್ ಅನುಚಿತವಾಗಿ ವರ್ತಿಸುತ್ತಿದ್ದ. ಈ ಬಗ್ಗೆ ಬಾಲಕಿ ಪ್ರತಿರೋಧಿಸಿದಾಗ ಜಮಾಲುದ್ದೀನ್ ಜೀವಬೆದರಿಕೆ ಒಡ್ಡಿದ್ದಾನೆ. ಇದರಿಂದಾಗಿ ಹೆದರಿದ್ದ ಬಾಲಕಿ ಆತನ ವರ್ತನೆಯ ಬಗ್ಗೆ ಯಾರಿಗೂ ತಿಳಿಸಿಲ್ಲ.

ಆ.13ರಂದು ಸಂಜೆ ಬಾಲಕಿ ಆಕೆಯ ಮನೆಯಲ್ಲಿ ಒಬ್ಬಳೇ ಇದ್ದಾಗ ಮನೆಗೆ ಬಂದ ಜಮಾಲುದ್ದೀನ್ ಆಕೆಯನ್ನು ಬೆದರಿಸಿ ಅತ್ಯಾಚಾರವೆಸಗಿದ್ದಾನೆ ಎಂದು ಆ. 15ರಂದು ನೀಡಿದ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣಾ .: 56/2026 ໖໐: 75(2), 64(1), 65(1), 351(3) BNS 2023 : 4(2), 8, 12 ಪೋಕ್ಸ್‌ ಕಾಯಿದೆ- 2012 ರಂತೆ ಪ್ರಕರಣ ದಾಖಲಾಗಿದೆ. ಆರೋಪಿ ಜಮಾಲುದ್ದೀನನ್ನು ಆ.15ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Related posts

ಉಜಿರೆ ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಸಚಿವ ಮತ್ತು ಕೆಪಿಸಿಸಿ ಉಪಾಧ್ಯಕ್ಷರು ಗಂಗಾಧರ ಗೌಡ ಭೇಟಿ

Suddi Udaya

ಕೊಯ್ಯೂರು: ಕೊಟ್ಟಿಗೆಗೆ ನುಗ್ಗಿ ಆಡಿನ ಮೇಲೆ ಚಿರತೆ ದಾಳಿ: ಒಂದು ಆಡು ಸಾವು, ಮತ್ತೊಂದು ಆಡು ಚಿರತೆ ಪಾಲು

Suddi Udaya

ಮಿತ್ತಬಾಗಿಲು: ಭಾರಿ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿತ: ಅಪಾರ ಹಾನಿ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭ ಹಾಗೂ ಆಟಿದ ಕೂಟ

Suddi Udaya

ಕೆಮ್ಮಿನ ಸಿರಪ್‌ ಗೆ ವೈದ್ಯರ ಚೀಟಿ ಕಡ್ಡಾಯ: ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

Suddi Udaya
error: Content is protected !!