ಬೆಳ್ತಂಗಡಿ: ಉಜಿರೆ-ಧರ್ಮಸ್ಥಳ ಮಾರ್ಗವಾಗಿ ರಾತ್ರಿ ವೇಳೆ ಸಂಚರಿಸುವ ಕೆಲವು ಖಾಸಗಿ ಬಸ್ಗಳ ಚಾಲಕರ ಬೇಜವಾಬ್ದಾರಿತನ ಹಾಗೂ ಅತಿ ವೇಗದ ಚಾಲನೆ ಸಾರ್ವಜನಿಕರ ಮತ್ತು ಪ್ರಯಾಣಿಕರ ಜೀವಕ್ಕೆ ಕುತ್ತು ತರುತ್ತಿದೆ ಎಂದು ಆರೋಪಿಸಿ ಬೆಳ್ತಂಗಡಿ ಸಂಚಾರಿ ಪೊಲೀಸ್ ಉಪನಿರೀಕ್ಷಕರಿಗೆ ಯುವ ಕಾಂಗ್ರೇಸ್ ಗ್ರಾಮೀಣ ಬ್ಲಾಕ್ ಉಪಾಧ್ಯಕ್ಷ ಯತೀಶ್ ಧರ್ಮಸ್ಥಳ ದೂರು ನೀಡಿದ್ದಾರೆ.

ಉಜಿರೆಯಿಂದ ಧರ್ಮಸ್ಥಳ ಮಾರ್ಗವಾಗಿ ರಾತ್ರಿ ವೇಳೆ ಮೂಡಬಿದ್ರೆಯಿಂದ ಬೆಂಗಳೂರಿಗೆ ಸಂಚರಿಸುವ ಕೆಲವು ಖಾಸಗಿ ಬಸ್ಗಳ ಚಾಲಕರು ಅತಿವೇಗವಾಗಿ ಹಾಗೂ ಅಜಾಗರೂಕತೆಯಿಂದ ಬಸ್ ಚಲಾಯಿಸುತ್ತಿರುವುದು ಕಂಡುಬರುತ್ತಿದೆ. ಇತರ ವಾಹನಗಳನ್ನು ಅಪಾಯಕಾರಿ ರೀತಿಯಲ್ಲಿ ಓವರ್ಟೇಕ್ ಮಾಡುವುದು, ವೇಗವಾಗಿ ವಾಹನ ಚಲಾಯಿಸುವುದು ಹಾಗೂ ಟ್ರಾಫಿಕ್ ನಿಯಮಗಳನ್ನು ಸರಿಯಾಗಿ ಪಾಲಿಸದಿರುವುದರಿಂದ ಪ್ರಯಾಣಿಕರು ಮತ್ತು ರಸ್ತೆಯಲ್ಲಿ ಸಂಚರಿಸುವ ಇತರ ವಾಹನ ಸವಾರರ ಜೀವಕ್ಕೆ ಅಪಾಯ ಉಂಟಾಗುತ್ತಿದೆ.
ಇಂತಹ ನಿರ್ಲಕ್ಷ್ಯ ಚಾಲನೆಯಿಂದ ಯಾವುದೇ ಸಮಯದಲ್ಲಿ ಗಂಭೀರ ಅಪಘಾತ ಸಂಭವಿಸುವ ಸಾಧ್ಯತೆ ಇದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಸಂಬಂಧಿಸಿದ ಬಸ್ ಚಾಲಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಎಲ್ಲಾ ಖಾಸಗಿ ಬಸ್ ಚಾಲಕರಿಗೆ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿ, ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡುವಂತೆ ಕ್ರಮ ಕೈಗೊಳ್ಳಬೇಕಾಗಿ ಯುವ ಕಾಂಗ್ರೇಸ್ ಗ್ರಾಮೀಣ ಬ್ಲಾಕ್ ಉಪಾಧ್ಯಕ್ಷ ಯತೀಶ್ ಧರ್ಮಸ್ಥಳ ದೂರಿನಲ್ಲಿ ತಿಳಿಸಿದ್ದಾರೆ.











