29.9 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಾತ್ರಿ ವೇಳೆ ಖಾಸಗಿ ಬಸ್‌ಗಳ ಅಜಾಗರೂಕ ಚಾಲನೆ; ಪೊಲೀಸ್ ಠಾಣೆಗೆ ಯುವ ಕಾಂಗ್ರೇಸ್ ಗ್ರಾಮೀಣ ಬ್ಲಾಕ್ ಉಪಾಧ್ಯಕ್ಷ ಯತೀಶ್ ಧರ್ಮಸ್ಥಳ ದೂರು

ಬೆಳ್ತಂಗಡಿ: ಉಜಿರೆ-ಧರ್ಮಸ್ಥಳ ಮಾರ್ಗವಾಗಿ ರಾತ್ರಿ ವೇಳೆ ಸಂಚರಿಸುವ ಕೆಲವು ಖಾಸಗಿ ಬಸ್‌ಗಳ ಚಾಲಕರ ಬೇಜವಾಬ್ದಾರಿತನ ಹಾಗೂ ಅತಿ ವೇಗದ ಚಾಲನೆ ಸಾರ್ವಜನಿಕರ ಮತ್ತು ಪ್ರಯಾಣಿಕರ ಜೀವಕ್ಕೆ ಕುತ್ತು ತರುತ್ತಿದೆ ಎಂದು ಆರೋಪಿಸಿ ಬೆಳ್ತಂಗಡಿ ಸಂಚಾರಿ ಪೊಲೀಸ್ ಉಪನಿರೀಕ್ಷಕರಿಗೆ ಯುವ ಕಾಂಗ್ರೇಸ್ ಗ್ರಾಮೀಣ ಬ್ಲಾಕ್ ಉಪಾಧ್ಯಕ್ಷ ಯತೀಶ್ ಧರ್ಮಸ್ಥಳ ದೂರು ನೀಡಿದ್ದಾರೆ.

ಉಜಿರೆಯಿಂದ ಧರ್ಮಸ್ಥಳ ಮಾರ್ಗವಾಗಿ ರಾತ್ರಿ ವೇಳೆ ಮೂಡಬಿದ್ರೆಯಿಂದ ಬೆಂಗಳೂರಿಗೆ ಸಂಚರಿಸುವ ಕೆಲವು ಖಾಸಗಿ ಬಸ್‌ಗಳ ಚಾಲಕರು ಅತಿವೇಗವಾಗಿ ಹಾಗೂ ಅಜಾಗರೂಕತೆಯಿಂದ ಬಸ್‌ ಚಲಾಯಿಸುತ್ತಿರುವುದು ಕಂಡುಬರುತ್ತಿದೆ. ಇತರ ವಾಹನಗಳನ್ನು ಅಪಾಯಕಾರಿ ರೀತಿಯಲ್ಲಿ ಓವರ್‌ಟೇಕ್ ಮಾಡುವುದು, ವೇಗವಾಗಿ ವಾಹನ ಚಲಾಯಿಸುವುದು ಹಾಗೂ ಟ್ರಾಫಿಕ್ ನಿಯಮಗಳನ್ನು ಸರಿಯಾಗಿ ಪಾಲಿಸದಿರುವುದರಿಂದ ಪ್ರಯಾಣಿಕರು ಮತ್ತು ರಸ್ತೆಯಲ್ಲಿ ಸಂಚರಿಸುವ ಇತರ ವಾಹನ ಸವಾರರ ಜೀವಕ್ಕೆ ಅಪಾಯ ಉಂಟಾಗುತ್ತಿದೆ.

ಇಂತಹ ನಿರ್ಲಕ್ಷ್ಯ ಚಾಲನೆಯಿಂದ ಯಾವುದೇ ಸಮಯದಲ್ಲಿ ಗಂಭೀರ ಅಪಘಾತ ಸಂಭವಿಸುವ ಸಾಧ್ಯತೆ ಇದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಸಂಬಂಧಿಸಿದ ಬಸ್ ಚಾಲಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಎಲ್ಲಾ ಖಾಸಗಿ ಬಸ್ ಚಾಲಕರಿಗೆ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿ, ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡುವಂತೆ ಕ್ರಮ ಕೈಗೊಳ್ಳಬೇಕಾಗಿ ಯುವ ಕಾಂಗ್ರೇಸ್ ಗ್ರಾಮೀಣ ಬ್ಲಾಕ್ ಉಪಾಧ್ಯಕ್ಷ ಯತೀಶ್ ಧರ್ಮಸ್ಥಳ ದೂರಿನಲ್ಲಿ ತಿಳಿಸಿದ್ದಾರೆ.

Related posts

ಮಂಗಳೂರು ಕ್ಯಾಂಪ್ಕೊ “ಸಾಂತ್ವನ” ಯೋಜನೆಯಡಿ ಸಹಾಯಧನ ಹಸ್ತಾಂತರ

Suddi Udaya

ಪಶ್ಚಿಮ ಘಟ್ಟದ ಎಲ್ಲ ಅರಣ್ಯ ಒತ್ತುವರಿ ಮತ್ತು ಅನಧಿಕೃತ ಹೋಮ್ ಸ್ಟೇ, ಬಡಾವಣೆ, ರೆಸಾರ್ಟ್ ಗಳನ್ನು ತೆರವುಗೊಳಿಸುವಂತೆ ಅರಣ್ಯ ಸಚಿವರಿಂದ ಖಡಕ್ ಸೂಚನೆ

Suddi Udaya

ಬಂದಾರು, ಮೈರೋಳ್ತಡ್ಕ, ಪೆರ್ಲ -ಬೈಪಾಡಿ, ಕುಂಟಾಲಪಲ್ಕೆ, ಮೊಗ್ರು, ಪದ್ಮುಂಜ ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ: ಸಮಸ್ಯೆಗೆ ಪರಿಹಾರ ಸಿಗದಿದ್ದಲ್ಲಿ ಪ್ರತಿಭಟನೆ ಬಗ್ಗೆ ಸ್ಥಳೀಯರ ಆಗ್ರಹ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

Suddi Udaya

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಶ್ರೀ ಧ. ಮಂ.ಆಂ.ಮಾ. ಶಾಲೆಯಲ್ಲಿ ಆಟಿದ ಕೂಟ

Suddi Udaya
error: Content is protected !!