27.9 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಗುರುದೇವ ಕಾಲೇಜಿನಲ್ಲಿ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ : ಬೆಳ್ತಂಗಡಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜು ಮತ್ತು ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ಇದರ ಆಶ್ರಯದಲ್ಲಿ ಕಾಲೇಜಿನ ಎನ್.ಎಸ್.ಎಸ್ ಘಟಕ ಹಾಗೂ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ನೇತೃತ್ವದಲ್ಲಿ ಸಂಚಾರ ನಿಯಮಗಳ ಪಾಲನೆ ಹಾಗೂ ಪೋಕ್ಸೋ ಕಾಯಿದೆ ಕುರಿತು ಮಾಹಿತಿ ಕಾರ್ಯಾಗಾರ ಆ.20 ರಂದುಕಾಲೇಜಿನಲ್ಲಿ ನಡೆಯಿತು.

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ನಿಂಗಪ್ಪ ಜಕ್ಕಣ್ಣನವರ ಮಾಹಿತಿ ನೀಡಿ, ‘ ರಸ್ತೆ ಸಂಚಾರ ನಿಯಮಗಳನ್ನು ಪಾಲಿಸುವುದು ಪ್ರತಿ ಪ್ರಯಾಣಿಕರ ಕರ್ತವ್ಯವಾಗಿದೆ. ನಿಯಮಗಳನ್ನು ಪಾಲಿಸುವುದರಿಂದ ಯಾವುದೇ ಆತಂಕವಿಲ್ಲದೆ ಸಂಚರಿಸಬಹುದು’ ಎಂದು ಹೇಳಿ ಸಂಚಾರ ನಿಯಮಗಳ ಹಲವಾರು ಮಾಹಿತಿಗಳನ್ನು ನೀಡಿದರು.

ಪೋಕ್ಸೋ ಕಾಯಿದೆ ಕುರಿತು ಮಾತನಾಡಿ, ‘ಇಂದು ಪೋಕ್ಸೋ ಗಂಭೀರ ಪ್ರಕರಣವಾಗಿದ್ದು ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಹೆಣ್ಣು ಮಕ್ಕಳು ಯಾವುದೇ ಆತಂಕವಿಲ್ಲದೆ ದೂರು ನೀಡಬಹುದು. ಭಯ ರಹಿತ ಸಮಾಜ ಸೃಷ್ಟಿಸುವುದು ಪೊಲೀಸರು ಹಾಗೂ ಸಾರ್ವಜನಿಕರ ಕೆಲಸವಾಗಿದೆ’ ಎಂದರು.

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಸುಕೇಶ್ ಕುಮಾರ್ ಕೆ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಶ್ರೀ ಗುರುದೇವ ಪದವಿ ಕಾಲೇಜಿನ ಪ್ರಾಂಶುಪಾಲೆ ಡಾ. ಸವಿತಾ ಇದ್ದರು.

ಕಾಲೇಜಿನ ಉಪ ಪ್ರಾಂಶುಪಾಲ ಬಿ. ಎ. ಶಮೀವುಲ್ಲಾ ಸ್ವಾಗತಿಸಿ, ಇತಿಹಾಸ ಉಪನ್ಯಾಸಕ ಹರೀಶ್ ಪೂಜಾರಿ ನಿರೂಪಿಸಿದರು. ಪ್ರಥಮ ದರ್ಜೆ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಿಕಿ ಸುವರ್ಣ ವಂದಿಸಿದರು.

Related posts

ಮಡಂತ್ಯಾರು ಮಂಡಲ ವತಿಯಿಂದ ಹಿಂದೂ ಸಂಗಮ; ಭವ್ಯ ಶೋಭಾಯಾತ್ರೆ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಸನ್ನಿಧಾನದಲ್ಲಿ ನಾಗಬ್ರಹ್ಮ ಮಂಡಲ ಮೊದಲ ದಿನ ಪೂಜೆ ಸಂದರ್ಭದಲ್ಲಿ ಕೃಷ್ಣಸರ್ಪ ಪ್ರತ್ಯಕ್ಷ

Suddi Udaya

ಬೆಳ್ತಂಗಡಿ : ಎಸ್.ಐ.ಟಿ ತನಿಖೆ ಮುಂದುವರಿಯಲಿ ಅರ್ಜಿದಾರರಿಗೆ ಕಿರುಕುಳ ಬೇಡ ಹೈಕೋರ್ಟ್

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವೃತ್ತಿಪರ ಕೌಶಲ್ಯದ ತರಬೇತಿ ಕಾರ್ಯಾಗಾರ

Suddi Udaya

ಬೈಲಂಗಡಿ :ಶ್ರೀ ಸೋಮನಾಥೇಶ್ವರ ದೇವಸ್ಥಾನ ತೋಟತ್ತಾಡಿ ಬ್ರಹ್ಮ ಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya

ನ.15 : ತ್ರೈಮಾಸಿಕ ಜಿಲ್ಲಾ ಕೆ. ಡಿ.ಪಿ. ಸಭೆ

Suddi Udaya
error: Content is protected !!