ಬೆಳ್ತಂಗಡಿ : ಬೆಳ್ತಂಗಡಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜು ಮತ್ತು ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ಇದರ ಆಶ್ರಯದಲ್ಲಿ ಕಾಲೇಜಿನ ಎನ್.ಎಸ್.ಎಸ್ ಘಟಕ ಹಾಗೂ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ನೇತೃತ್ವದಲ್ಲಿ ಸಂಚಾರ ನಿಯಮಗಳ ಪಾಲನೆ ಹಾಗೂ ಪೋಕ್ಸೋ ಕಾಯಿದೆ ಕುರಿತು ಮಾಹಿತಿ ಕಾರ್ಯಾಗಾರ ಆ.20 ರಂದುಕಾಲೇಜಿನಲ್ಲಿ ನಡೆಯಿತು.

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ನಿಂಗಪ್ಪ ಜಕ್ಕಣ್ಣನವರ ಮಾಹಿತಿ ನೀಡಿ, ‘ ರಸ್ತೆ ಸಂಚಾರ ನಿಯಮಗಳನ್ನು ಪಾಲಿಸುವುದು ಪ್ರತಿ ಪ್ರಯಾಣಿಕರ ಕರ್ತವ್ಯವಾಗಿದೆ. ನಿಯಮಗಳನ್ನು ಪಾಲಿಸುವುದರಿಂದ ಯಾವುದೇ ಆತಂಕವಿಲ್ಲದೆ ಸಂಚರಿಸಬಹುದು’ ಎಂದು ಹೇಳಿ ಸಂಚಾರ ನಿಯಮಗಳ ಹಲವಾರು ಮಾಹಿತಿಗಳನ್ನು ನೀಡಿದರು.

ಪೋಕ್ಸೋ ಕಾಯಿದೆ ಕುರಿತು ಮಾತನಾಡಿ, ‘ಇಂದು ಪೋಕ್ಸೋ ಗಂಭೀರ ಪ್ರಕರಣವಾಗಿದ್ದು ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಹೆಣ್ಣು ಮಕ್ಕಳು ಯಾವುದೇ ಆತಂಕವಿಲ್ಲದೆ ದೂರು ನೀಡಬಹುದು. ಭಯ ರಹಿತ ಸಮಾಜ ಸೃಷ್ಟಿಸುವುದು ಪೊಲೀಸರು ಹಾಗೂ ಸಾರ್ವಜನಿಕರ ಕೆಲಸವಾಗಿದೆ’ ಎಂದರು.
ಶ್ರೀ ಗುರುದೇವ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಸುಕೇಶ್ ಕುಮಾರ್ ಕೆ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಶ್ರೀ ಗುರುದೇವ ಪದವಿ ಕಾಲೇಜಿನ ಪ್ರಾಂಶುಪಾಲೆ ಡಾ. ಸವಿತಾ ಇದ್ದರು.
ಕಾಲೇಜಿನ ಉಪ ಪ್ರಾಂಶುಪಾಲ ಬಿ. ಎ. ಶಮೀವುಲ್ಲಾ ಸ್ವಾಗತಿಸಿ, ಇತಿಹಾಸ ಉಪನ್ಯಾಸಕ ಹರೀಶ್ ಪೂಜಾರಿ ನಿರೂಪಿಸಿದರು. ಪ್ರಥಮ ದರ್ಜೆ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಿಕಿ ಸುವರ್ಣ ವಂದಿಸಿದರು.











