29.9 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ–ಬೆಳಾಲು ಓಡಲ ರಸ್ತೆಯಲ್ಲಿ ಅಪಘಾತಕ್ಕೆ ಆಹ್ವಾನ ನೀಡುತ್ತಿರುವ ರಸ್ತೆ ದಿಣ್ಣೆ: ರಸ್ತೆ ದಿಣ್ಣೆಗೆ ಬಿಳಿ ಬಣ್ಣ ಬಳಿದು, ರಿಪ್ಲೆಕ್ಟರ್ ಅಳವಡಿಸುವಂತೆ ಸಾರ್ವಜನಿಕರ ಒತ್ತಾಯ

ಬೆಳ್ತಂಗಡಿ: ಉಜಿರೆ–ಬೆಳಾಲು ಸಂಪರ್ಕಿಸುವ ಓಡಲ ರಸ್ತೆಯಲ್ಲಿರುವ ರಸ್ತೆ ದಿಣ್ಣೆಯಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದು, ಅಪಘಾತಗಳು ಸಂಭವಿಸುವ ಆತಂಕ ಎದುರಾಗಿದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ.

ಓಡಲ ರಸ್ತೆಯಲ್ಲಿರುವ ರಸ್ತೆ ದಿಣ್ಣೆಗೆ ಯಾವುದೇ ಬಿಳಿ ಬಣ್ಣ ಬಳಿದಿಲ್ಲ. ಅಲ್ಲದೆ, ರಾತ್ರಿ ವೇಳೆಯಲ್ಲಿ ವಾಹನ ಸವಾರರಿಗೆ ಸ್ಪಷ್ಟವಾಗಿ ಕಾಣುವಂತೆ ರಿಪ್ಲೆಕ್ಟರ್‌ಗಳನ್ನೂ ಅಳವಡಿಸಲಾಗಿಲ್ಲ. ಇದರಿಂದ ರಾತ್ರಿ ಸಮಯದಲ್ಲಿ ರಸ್ತೆ ದಿಣ್ಣೆ ಗಮನಕ್ಕೆ ಬಾರದೆ ವಾಹನಗಳು ಅಪಘಾತಕ್ಕೀಡಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ರಸ್ತೆಯಲ್ಲಿ ಪ್ರತಿದಿನ ನೂರಾರು ವಾಹನಗಳು ಸಂಚರಿಸುತ್ತಿದ್ದು, ರಸ್ತೆ ದಿಣ್ಣೆ ಸೂಕ್ತವಾಗಿ ಗುರುತಿಸುವಂತಿಲ್ಲದಿರುವುದು ಅಪಾಯಕ್ಕೆ ಕಾರಣವಾಗುತ್ತಿದೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ರಸ್ತೆ ದಿಣ್ಣೆಗೆ ಬಿಳಿ ಬಣ್ಣ ಬಳಿದು, ಅಗತ್ಯವಿರುವ ರಿಪ್ಲೆಕ್ಟರ್‌ಗಳನ್ನು ಅಳವಡಿಸುವ ಮೂಲಕ ವಾಹನ ಸವಾರರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Related posts

ಮಹಾಕುಂಭಮೇಳದಲ್ಲಿ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ಸಿಬ್ಬಂದಿಗಳಿಂದ ಪುಣ್ಯ ಸ್ನಾನ

Suddi Udaya

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಅಳದಂಗಡಿ ಸರ್ಕಾರಿ ಕಾಲೇಜಿನಲ್ಲಿ ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ

Suddi Udaya

ಜು. 27, 28: ಗೃಹಜ್ಯೋತಿ ಫಲಾನುಭವಿಗಳ ಹೆಚ್ಚುವರಿ ಮಾಹಿತಿ ಸಂಗ್ರಹಣೆ: ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್ ಲಾಯಿಲ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya

ಮುಂಡಾಜೆ ಶ್ರೀ ಸನ್ಯಾ ಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!