27.9 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಪರಿಸರದಲ್ಲಿ ಎರಡು ದಿನಗಳಲ್ಲಿ 4 ಕಾಡಂದಿಗಳ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ; ಮಿದುಳು ಜ್ವರದಿಂದ ಸಾವು ಸ್ಥಳೀಯರ ಶಂಕೆ

ನಡ: ನಡ ಗ್ರಾಮದ ಪರಿಸರದಲ್ಲಿ ಕಳೆದ ಎರಡು ದಿನಗಳಲ್ಲಿ ನಾಲ್ಕು ಕಾಡು ಹಂದಿಗಳು ಸಾವನ್ನಪ್ಪಿರುವುದು ಕಂಡು ಬಂದಿದ್ದು, ಕಾಡು ಹಂದಿಗಳು ಮಿದುಳು ಜ್ವರದಿಂದ ಸಾವನ್ನಪ್ಪಿರಬಹುದೆಂಬ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.

ನಡ ಗ್ರಾಮದ ಪ್ರೌಢ ಶಾಲಾ ಬಳಿ ಕಾಡಿನಲ್ಲಿ ನಿನ್ನೆ ಆ.20ರಂದು ಎರಡು ಕಾಡುಹಂದಿಗಳ ಶವ ಪತ್ತೆಯಾಗಿದೆ. ಎರಡು ಶವಗಳು ಸಂಪೂರ್ಣವಾಗಿ ಕೊಳೆತು ಹೋಗಿತ್ತು. ಸ್ಥಳೀಯರು ಇದನ್ನು ದಫನ ಮಾಡಿದ್ದರು. ಆ.21 ಇಂದು ನಡ ಗ್ರಾಮದ ಕರ್ಮಿಲೆಟ್ ಗೋವಿಯಸ್ ಇವರ ರಬ್ಬರ ತೋಟದಲ್ಲಿ ಎರಡು ಕಾಡಿನ ಹಂದಿಗಳು ಸತ್ತು ಬಿದ್ದಿರುವುದು ಪತ್ತೆಯಾಗಿದೆ ಎಂದು ಸ್ಥಳೀಯ ಗಣ್ಯರಾದ ಶ್ಯಾಮಸುಂದರ್ ನಡ ತಿಳಿಸಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ ಹಾಗೂ ಆರೋಗ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಕುದುರೆಮುಖ ರಕ್ಷಿತಾರಣ್ಯದಿಂದ ಕಾಡಾಂದಿಗಳು ಈ ಪ್ರದೇಶಕ್ಕೆ ಬರುತ್ತಿದ್ದು, ಹಂದಿಗಳು ಯಾವುದಾದರೂ ಕಾಯಿಲೆಯಿಂದ ಮೃತಪಟ್ಟಿರಬಹುದೇ ಅಥವಾ ಕಿಡಿಗೇಡಿಗಳು ಇಟ್ಟ ವಿಷದಿಂದ ಈ ರೀತಿ ಆಗಿರಬಹುದೇ ಎಂಬುದು ಇನ್ನಷ್ಟೇ ತಿಳಿದು ಬರಬೇಕಾಗಿದೆ. ಕಾಡು ಹಂದಿಗಳ ತಲೆಯ ಭಾಗ ಕೊಳೆತು ಹೋಗಿರುವುದರಿಂದ ಮಿದುಳು ಜ್ವರದಿಂದ ಸಾವನ್ನಪ್ಪಿರಬಹುದೆಂಬ ಶಂಕೆ ಸ್ಥಳೀಯವಾಗಿ ವ್ಯಕ್ತವಾಗುತ್ತಿದೆ.

Related posts

ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಶಾಲಾ ಬಸ್ಸು ಚಾಲಕರಿಗೆ “ಸ್ಟೇರಿಂಗ್ ಟುವರ್ಡ್ಸ್ ಸೇಫ್ಟಿ” ಕಾರ್ಯಾಗಾರ

Suddi Udaya

ಉಜಿರೆ ವಿಶಾಲ್ ಸೇವಾ ಟ್ರಸ್ಟ್ ನಿಂದ ಬದನಾಜೆ ಶಾಲೆಗೆ ಕೊಡುಗೆ ಹಸ್ತಾಂತರ

Suddi Udaya

ವೇಣೂರು: ಲಯನ್ಸ್ ಕ್ಲಬ್ ನಲ್ಲಿ ಕಾರ್ಗಿಲ್ ದಿನಾಚರಣೆ

Suddi Udaya

ನಡ ಪ್ರೌಢ ಶಾಲೆ ಹಾಗೂ ಕಾಲೇಜಿಗೆ ನುಗ್ಗಿದ ಕಳ್ಳರು: ಸಿಸಿ ಕ್ಯಾಮರ ಹಾಗೂ ದಾಖಲೆ ಪತ್ರಗಳಿಗೆ ಹಾನಿ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಗೇರುಕಟ್ಟೆ ಶ್ರೀ ಪತಂಜಲಿ ಯೋಗ ಶಿಬಿರದ ಪ್ರಥಮ ವಾರ್ಷಿಕೋತ್ಸವ

Suddi Udaya
error: Content is protected !!