25.9 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್‌ಎಸ್‌ಎಸ್ ವತಿಯಿಂದ ಸದ್ಭಾವನಾ ದಿನ ಆಚರಣೆ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ಸದ್ಭಾವನಾ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ವಿದ್ಯಾರ್ಥಿಗಳಿಗೆ ಸದ್ಭಾವನಾ ದಿನದ ಮಹತ್ವವನ್ನು ತಿಳಿಸಿ, ಸದ್ಭಾವನಾ ದಿನದ ಪ್ರಮಾಣ ವಚನವನ್ನು ಬೋಧಿಸಿದರು. ವಿದ್ಯಾರ್ಥಿಗಳು ಶಾಂತಿ, ಸೌಹಾರ್ದತೆ, ಏಕತೆ, ಸಹಬಾಳ್ವೆ ಹಾಗೂ ಪರಸ್ಪರ ಗೌರವದ ಮನೋಭಾವವನ್ನು ಬೆಳೆಸಿಕೊಳ್ಳುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ದಿನೇಶ್ ಗೌಡ ಹಾಗೂ ಸಹಕಾರ್ಯಕ್ರಮಾಧಿಕಾರಿ ಕು. ಶ್ರಾವ್ಯ ಉಪಸ್ಥಿತರಿದ್ದರು. ಎನ್‌ಎಸ್‌ಎಸ್ ಸ್ವಯಂಸೇವಕರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.ಸದ್ಭಾವನೆ, ಸಹೋದರತ್ವ ಮತ್ತು ರಾಷ್ಟ್ರೀಯ ಏಕತೆಯ ಮೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಆಯೋಜಿಸಲಾದ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.

Related posts

ಉದ್ಯಮಿ ಉದಯ್ ಕುಮಾರ್ ಶೆಟ್ಟಿ ಮುನಿಯಾಲು ಗುರುವಾಯನಕೆರೆ ಅರೆಮಲೆಬೆಟ್ಟಕ್ಕೆ ಭೇಟಿ

Suddi Udaya

ಕಾಜೂರು ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆ ಫಲಾನುಭವಿಗಳಲ್ಲಿ ಕರ್ನಾಟಕ ಮುಂಚೂಣಿ : ಕೇಂದ್ರ ಸರ್ಕಾರದಿಂದ ಎಸ್‌ಸಿ-ಎಸ್‌ಟಿ, ಮಹಿಳೆಯರಿಗೆ 2,946 ಕೋಟಿ ಸಾಲ; ಸಂಸದ ಕ್ಯಾ. ಚೌಟ ಶ್ಲಾಘನೆ

Suddi Udaya

ಇಂದು (ಫೆ.20) : ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ‘ಜೋಡು ಜೀಟಿಗೆ ನಾಟಕ

Suddi Udaya

ಗುರುವಾಯನಕರೆ ವ್ಯಾಪ್ತಿಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya

ಮದರಂಗಿ ಶಾಸ್ತ್ರದ ನಡುವೆ ಮತಚಲಾಯಿಸಿದ ಮದುಮಗಳು: ಮಲವಂತಿಗೆ ಗ್ರಾಮದ ಮೋಹಿನಿಯವರು ಮತಚಲಾಯಿಸಿ ಎಲ್ಲರ ಗಮನ ಸೆಳೆದರು

Suddi Udaya
error: Content is protected !!