ಅರಸಿನಮಕ್ಕಿ : ಚೈತನ್ಯ ಮಿತ್ರ ಕಲಾವೃಂದ ಅರಸಿನಮಕ್ಕಿ ಇದರ ಆಶ್ರಯದಲ್ಲಿ 23ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣಜನ್ಮಾಷ್ಟಮಿ ಉತ್ಸವ ಸೆ.5 ರಂದು ನಡೆಯಲಿದ್ದು ಆಮಂತ್ರಣ ಪತ್ರಿಕೆಯನ್ನು ಆ.21ರಂದು ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷ ಮುರಳೀಧರ ಶೆಟ್ಟಿಗಾರ್, ನಿಕಟ ಪೂರ್ವ ಅಧ್ಯಕ್ಷ ಗಣೇಶ್ ಹೊಸ್ತೋಟ, ಜಯಪ್ರಸಾದ್ ಶೆಟ್ಟಿಗಾರ್, ಅರ್ಚಕರಾದ ವೃಷಾಂಕ್ ಖಾಡಿಲ್ಕರ್, ಸಂಘಟನೆಯ ಪದಾಧಿಕಾರಿಗಳು, ದೇವಸ್ಥಾನದ ವಿವಿಧ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.











