29 C
ಪುತ್ತೂರು, ಬೆಳ್ತಂಗಡಿ
August 22, 2026
ಧಾರ್ಮಿಕ

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಓಣಂ ಆಚರಣೆ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿಯಲ್ಲಿ ಓಣಂ ಹಬ್ಬವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ವಿಷ್ಣು ಪ್ರಕಾಶ್ ಎಂ. ಅವರು ಪೂಕಳಂನಲ್ಲಿರುವ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಓಣಂ ಹಬ್ಬದ ಮಹತ್ವ ಹಾಗೂ ಅದರ ಸಾಂಸ್ಕೃತಿಕ ಹಿನ್ನೆಲೆಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಲಾಯಿತು.

ಕಾರ್ಯಕ್ರಮದ ಸಂಯೋಜಕರಾಗಿ ಕಾಲೇಜಿನ ಉಪನ್ಯಾಸಕರಾದ ಶ್ರೀ ರವಿಶಂಕರ್ ಪಿ. ಹಾಗೂ ಶ್ರೀಮತಿ ಶಾಲಿಕ ಪಿ.ಆರ್. ಅವರು ಕಾರ್ಯನಿರ್ವಹಿಸಿದರು. ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ಸಹಕಾರದಿಂದ ಕಾರ್ಯಕ್ರಮವು ಅರ್ಥಪೂರ್ಣವಾಗಿ ನೆರವೇರಿತು.

ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿಯಲ್ಲಿ ವೈವಿಧ್ಯಮಯ ಸಂಸ್ಕೃತಿ, ಸೌಹಾರ್ದತೆ ಹಾಗೂ ಒಗ್ಗಟ್ಟಿನ ಸಂದೇಶ ಸಾರುವ ರೀತಿಯಲ್ಲಿ ಓಣಂ ಆಚರಣೆ ನಡೆಯಿತು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಉಜಿರೆ: ಅಲ್-ಅಮೀನ್ ಯಂಗ್-ಮೆನ್ಸ್ ಹಳೆಪೇಟೆ ಇದರ ವತಿಯಿಂದ ಸುನ್ನತ್ (ಮುಂಜಿ) ಕಾರ್ಯಕ್ರಮ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ

Suddi Udaya

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಟಿ. ಎ. ಶರವಣ ರವರು ಭೇಟಿ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶತಚಂಡಿಕಾಯಾಗ

Suddi Udaya
error: Content is protected !!