28.8 C
ಪುತ್ತೂರು, ಬೆಳ್ತಂಗಡಿ
August 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಂಚಣಿಗೆ ಆದಾಯ ಮಿತಿ ರೂ. 32 ಸಾವಿರದಿಂದ ರೂ.1.20 ಲಕ್ಷಕ್ಕೆ ಹೆಚ್ಚಳ: ಬಡಜನರ ಕಣ್ಣೀರು ಒರೆಸಿದ ಐತಿಹಾಸಿಕ ತೀರ್ಮಾನ — ರಕ್ಷಿತ್ ಶಿವರಾಂ

ಬೆಳ್ತಂಗಡಿ: ಸಾಮಾಜಿಕ ಭದ್ರತಾ ಯೋಜನೆಗಳಡಿ ಪಿಂಚಣಿ ಪಡೆಯುತ್ತಿದ್ದ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಮಹತ್ವದ ಸಿಹಿಸುದ್ದಿ ನೀಡಿದ್ದು, ಪಿಂಚಣಿ ಪಡೆಯಲು ಈ ಹಿಂದೆ ವಿಧಿಸಲಾಗಿದ್ದ ವಾರ್ಷಿಕ ಆದಾಯ ಮಿತಿಯನ್ನು ₹32 ಸಾವಿರದಿಂದ ₹1.20 ಲಕ್ಷಕ್ಕೆ ಹೆಚ್ಚಿಸಿರುವುದು ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ದೊಡ್ಡ ನೆಮ್ಮದಿ ನೀಡಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದ್ದಾರೆ.

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳ ಫಲಾನುಭವಿಗಳ ಪೈಕಿ 23,14,544 ಫಲಾನುಭವಿಗಳ ದಾಖಲೆಗಳು ಸಂಶಯಾಸ್ಪದವಾಗಿ ಕಂಡುಬಂದ ಹಿನ್ನೆಲೆಯಲ್ಲಿ, ಮೊಬೈಲ್ ಆ್ಯಪ್ ಮೂಲಕ ಭೌತಿಕ ದಾಖಲಾತಿಗಳನ್ನು ಪರಿಶೀಲನೆ ನಡೆಸಲಾಗಿತ್ತು. ಈ ಪರಿಶೀಲನೆಯ ಸಂದರ್ಭದಲ್ಲಿ 18,06,032 ಪಿಂಚಣಿದಾರರ ಆದಾಯ ಮಿತಿ ಹೆಚ್ಚಾಗಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಅವರ ಪಿಂಚಣಿಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿತ್ತು.ಆದರೆ ಇದೀಗ ರಾಜ್ಯ ಸರ್ಕಾರ ಮಾನವೀಯ ಹಾಗೂ ಜನಪರ ನಿಲುವು ತಳೆದು ಪಿಂಚಣಿ ಫಲಾನುಭವಿಗಳ ಆದಾಯ ಮಿತಿಯನ್ನು ₹32 ಸಾವಿರದಿಂದ ₹1.20 ಲಕ್ಷಕ್ಕೆ ಹೆಚ್ಚಿಸುವ ಮೂಲಕ ಆದಾಯ ಮಿತಿ ಕಾರಣದಿಂದ ತಡೆಹಿಡಿಯಲಾಗಿದ್ದ 18,06,032 ಪಿಂಚಣಿದಾರರಿಗೆ ಮತ್ತೆ ಪಿಂಚಣಿ ಮುಂದುವರಿಸಲು ಅವಕಾಶ ಕಲ್ಪಿಸಿರುವುದು ಅತ್ಯಂತ ಮಹತ್ವದ ನಿರ್ಧಾರವಾಗಿದೆ ಎಂದು ಅವರು ತಿಳಿಸಿದ್ದಾರೆ.“ಬಡವರು, ವೃದ್ಧರು, ವಿಧವೆಯರು, ಅಂಗವಿಕಲರು ಹಾಗೂ ಸಮಾಜದ ದುರ್ಬಲ ವರ್ಗದವರಿಗೆ ಸಾಮಾಜಿಕ ಭದ್ರತೆ ಒದಗಿಸುವುದು ಸರ್ಕಾರದ ಕರ್ತವ್ಯ. ಆದಾಯ ಮಿತಿ ಹೆಚ್ಚಿಸುವ ಮೂಲಕ ಲಕ್ಷಾಂತರ ಕುಟುಂಬಗಳಿಗೆ ಮತ್ತೆ ಆರ್ಥಿಕ ಭದ್ರತೆ ಕಲ್ಪಿಸಿರುವ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಉಪ ಮುಖ್ಯಮಂತ್ರಿ ಜಿ ಪರಮೇಶ್ವರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಈ ನಿರ್ಧಾರ ನಿಜಕ್ಕೂ ಐತಿಹಾಸಿಕವಾಗಿದೆ. ಇದು ಕೇವಲ ಆಡಳಿತಾತ್ಮಕ ತೀರ್ಮಾನವಲ್ಲ; ಸಂಕಷ್ಟದಲ್ಲಿರುವ ಬಡಜನರ ಕಣ್ಣೀರು ಒರೆಸುವ ಮಾನವೀಯ ನಿರ್ಧಾರವಾಗಿದೆ” ಎಂದು ರಕ್ಷಿತ್ ಶಿವರಾಂ ಹೇಳಿದ್ದಾರೆ.ಬಡವರ ಪರವಾಗಿ ನಿರಂತರವಾಗಿ ಕೆಲಸ ಮಾಡುತ್ತಿರುವ ರಾಜ್ಯ ಸರ್ಕಾರದ ಈ ಜನಪರ ನಿರ್ಧಾರವನ್ನು ಸ್ವಾಗತಿಸುವುದಾಗಿ ತಿಳಿಸಿರುವ ಅವರು, ಲಕ್ಷಾಂತರ ಪಿಂಚಣಿದಾರರಿಗೆ ಮತ್ತೆ ಸಾಮಾಜಿಕ ಭದ್ರತೆಯ ಆಶಾಕಿರಣ ಮೂಡಿಸಿರುವ ರಾಜ್ಯ ಸರ್ಕಾರಕ್ಕೆ ಬಡಜನರ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

Related posts

ಡ್ರಾಯಿಂಗ್ ಗ್ರೇಡ್ ಪರೀಕ್ಷೆ: ಎಕ್ಸೆಲ್ ಟೆಕ್ನೊ ಸ್ಕೂಲ್ ವೇಣೂರಿಗೆ ಶೇ.100 ಫಲಿತಾಂಶ:ತೇರ್ಗಡೆಯಾದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಬಿ

Suddi Udaya

ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಮಾಡಿದ ಗಣನೀಯ ಸೇವೆಯನ್ನು ಪರಿಗಣಿಸಿ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನರವರಿಗೆ ” ಕನ್ನಡ ರಾಜ್ಯೋತ್ಸವ ಪ್ರಶಸ್ತಿ”

Suddi Udaya

ಬೆಳಾಲು ಶ್ರೀ ಧ‌. ಮ. ಅ. ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮಾಲಾಡಿ ಶಾಲಾ ವಿದ್ಯಾರ್ಥಿಗಳಿಗೆ ದಾನಿ ಹಾಜಿ ಲತೀಫ್ ಸಾಹೇಬ್‌ ಕೊಡುಗೆಯಾಗಿ ನೀಡಿದ ಉಚಿತ ನೋಟ್ ಪುಸ್ತಕಗಳ ವಿತರಣೆ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ. ಅ. ಪ್ರೌಢಶಾಲೆಯ ವಿದ್ಯಾರ್ಥಿ ಜಾಹ್ನವಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಹಳೆಪೇಟೆ ಮಸೀದಿಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya
error: Content is protected !!