28.8 C
ಪುತ್ತೂರು, ಬೆಳ್ತಂಗಡಿ
August 23, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ಮಹಾಸಭೆ: ರೂ.69.68 ಲಕ್ಷ ನಿವ್ವಳ ಲಾಭ, ಶೇ. 10.25ಡಿವಿಡೆಂಟ್ ಘೋಷಣೆ

ಕೊಯ್ಯೂರು: ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘ ಇದರ 2025-26ನೇ ಸಾಲಿನ ಮಹಾಸಭೆಯು ಆ.23 ರಂದು ಪಂಚದುರ್ಗ ಸಹಕಾರಿ ಸಭಾಭವನದಲ್ಲಿ ಜರಗಿತು.

ಮಹಾಸಭೆಯ ಸಭಾ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರವೀಂದ್ರನಾಥ ಪಿ. ರವರು ವಹಿಸಿ ಮಾತನಾಡಿ ಸಂಘವು ಅನೇಕ ಹಿರಿಯ ಸಹಕಾರಿಗಳ ಮಾರ್ಗದರ್ಶನದಿಂದ ಹಾಗೂ ಸದಸ್ಯರುಗಳ ಉತ್ತಮ ಸಹಕಾರದಿಂದ 66 ವರ್ಷಗಳಿಂದ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಭಾರತದಲ್ಲಿ 30 ಕೋಟಿಗೂ ಹೆಚ್ಚು ಜನ ಸಹಕಾರ ಕ್ಷೇತ್ರದಲ್ಲಿ ವ್ಯವಹರಿಸುತ್ತಿದ್ದಾರೆ. ನಾನು ಮಾತ್ರ ಬೆಳೆಯುವುದಲ್ಲ, ಇನ್ನೊಬ್ಬರನ್ನೂ ಬೆಳೆಸಬೇಕು ಅನ್ನುವ ತತ್ವವೇ ಸಹಕಾರದ ಮೂಲ ಆಶಯ. ಸಂಘವು ಪ್ರಸಕ್ತ ಸಾಲಿನಲ್ಲಿ 2,01,24,88,127.78ರೂ. ನಷ್ಟು ವ್ಯವಹಾರ ನಡೆಸಿ 69,68,759.39ರೂ. ನಿವ್ವಳ ಲಾಭ ಗಳಿದ್ದು, ಶೇ.10.25 ಡಿವಿಡೆಂಟ್ ಘೋಷಿಸಿದರು.

ಸಾಧಕರಿಗೆ ಸನ್ಮಾನ-ಗೌರವ: ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಸಾಧಕ ವಿದ್ಯಾರ್ಥಿಗಳು, ವೈದ್ಯರುಗಳು, ಹಾಗೂ ಗಣ್ಯರನ್ನು ಗೌರವಿಸಲಾಯಿತು. ವೇದಿಕೆಯಲ್ಲಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಸಂಘದ ಉಪಾಧ್ಯಕ್ಷ ಪುರುಷೋತ್ತಮ, ನಿರ್ದೇಶಕರಾದ ಅಶೋಕ್ ಭಟ್, ಉಜ್ವಲ್ ಕುಮಾರ್, ದಾಮೋದರ ಗೌಡ, ಯತೀಶ, ಕುಸುಮಾವತಿ, ಶೋಭಾ, ಎನ್. ಪರಮೇಶ್ವರ ಗೌಡ, ಸಂಜೀವ ಎಂ.ಕೆ., ನವೀನ್ ಕುಮಾರ್, ಕೇಶವ ಪೂಜಾರಿ, ಕೇಂದ್ರ ಬ್ಯಾಂಕಿನ ಪ್ರತಿನಿಧಿ ಸುದರ್ಶನ್ ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಂತಕೃಷ್ಣ ಭಟ್ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕ ಉಜ್ವಲ್ ಕುಮಾರ್ ಸ್ವಾಗತಿಸಿದರು. ಸದಸ್ಯೆ ಕಾವ್ಯ ಪ್ರಾರ್ಥಿಸಿದರು. ನಿರ್ದೇಶಕ ಕೇಶವ ವಂದಿಸಿದರು. ಸಂಘದ ಸಿಬ್ಬಂದಿಗಳಾದ ಮಮತಾ ರೈ, ಕೇಶವ ಕೆ, ವಿನಾಯಕ ಬಿ, ಸುಕನ್ಯಾ ಬಿಜೆ, ಲೋಕೇಶ್, ಯತೀಶ್, ಸುದರ್ಶನ್, ದಿಲೀಪ್ ಕುಮಾರ್, ಚಂಪಾ, ಗೀತಾ, ಯೋಗೀಶ್ ಆಚಾರ್ಯ ಸಹಕರಿಸಿದರು.

Related posts

ಬೆಳ್ತಂಗಡಿ: ಯುವ ನಿಧಿ ನೋಂದಣಿ ಪ್ರಚಾರಕ್ಕೆ ಚಾಲನೆ

Suddi Udaya

ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅಂತ್ಯ ಹಿನ್ನಲೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಅಂಡಿಂಜೆ ನಿಸರ್ಗ ಸಂಜೀವಿನಿ ಒಕ್ಕೂಟದಲ್ಲಿ ಸ್ವಉದ್ಯೋಗ ಆರಿವರ್ಕ್ ತರಬೇತಿ ಕಾರ್ಯಗಾರ ಉದ್ಘಾಟನೆ

Suddi Udaya

ಬೆಳ್ತಂಗಡಿ ರಾಯಲ್ ಝೋನ್ ಬ್ಯಾಗ್ಸ್ ಮತ್ತು ಫೂಟ್‌ವೇರ್ ನಲ್ಲಿ ಪ್ರಥಮ ವರ್ಷದ ಸಂಭ್ರಮಾಚರಣೆ: ಪದ್ಮಶ್ರೀ ಪ್ರಶಸ್ತಿ ವಿಜೇತ ಹರೇಕಳ ಹಾಜಪ್ಪ,ರಾಷ್ಟ್ರ ಪ್ರಶಸ್ತಿ ವಿಜೇತ ಬಿ‌.ಕೆ ದೇವರಾವ್ ಹಾಗೂ ವಿವಿಧ ಸಾಧಕರಿಗೆ ಸನ್ಮಾನ

Suddi Udaya

ನಾವರ: 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ LAV(Lo Assistance Visit) ಕಾರ್ಯಕ್ರಮ

Suddi Udaya
error: Content is protected !!