
ಗುರುವಾಯನಕೆರೆ: ಇಲ್ಲಿನ ಶ್ರೀ ಶಾರದಾಂಭ ಭಜನಾ ಮಂಡಳಿಯ ವತಿಯಿಂದ, ಹಾಗು ಗೆಳೆಯರ ಬಳಗದ ಸಹಕಾರದೊಂದಿಗೆ ಶ್ರೀ ವರಮಹಾಲಕ್ಷ್ಮೀ ಪೂಜೆಯು ಬಳಗದ ಶಾರದಾ ಕಲಾ ಮಂಟಪದಲ್ಲಿ ವಿಜೃಂಭಣೆಯಿಂದ ಜರುಗಿತು.ವೇದಮೂರ್ತಿ ಶ್ರೀ ಕುತ್ಯಾರ್ ದಯಾಕರ್ ಭಟ್ ಇವರ ಪೌರೋಹಿತ್ಯ ದಲ್ಲಿ ಪೂಜಾ ಕಾರ್ಯ ನೆರವೇರಿತು.

ಈ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭೆ ಮತ್ತು ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ಕುಸುಮಾವತಿ ಕಂಚಿಂಜೆ , ಶ್ರೀಮತಿ ರೀತಾ ವೈ ಆಚಾರ್ಯ, ಯೋಗೀಶ್ ಆಚಾರ್ಯ, ಉಪಸ್ಥಿತರಿದ್ದರು. ಶ್ರೀಮತಿ ಸುಧಾಮಣಿ ಯವರು ಸ್ವಾಗತಿಸಿ, ಧನ್ಯವಾದವಿತ್ತರು. ಆನಂದ್ ಕೋಟ್ಯಾನ್ ರವರು ಕಾರ್ಯಕ್ರಮ ನಿರೂಪಿಸಿದರು. ಪೂಜೆಯ ಬಳಿಕ ಅನ್ನ ಸಂತರ್ಪಣೆ ಜರುಗಿತು.











