
ಗುರಿಪಳ್ಳ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ಸುವರ್ಣ ಮಹೋತ್ಸವ ಸಮಿತಿ – ಜಯನಗರ, ಗುರಿಪಳ್ಳ ಇದರ 50ನೇ ವರ್ಷದ ಸುವರ್ಣ ಮಹೋತ್ಸವ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಆ.23ರಂದು ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಗಣ್ಯರ ಸಮ್ಮುಖದಲ್ಲಿ ವಿಧಿವತ್ತಾಗಿ ಬಿಡುಗಡೆಗೊಳಿಸಲಾಯಿತು.
ಐದು ದಶಕಗಳ ಭಕ್ತಿ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಪಯಣವನ್ನು ಸ್ಮರಿಸುವ ಈ ಸುವರ್ಣ ಮಹೋತ್ಸವವು ಅತ್ಯಂತ ವಿಜೃಂಭಣೆಯಿಂದ ನಡೆಯಲು ಎಲ್ಲರ ಸಹಕಾರ, ಉಪಸ್ಥಿತಿ ಹಾಗೂ ಆಶೀರ್ವಾದವನ್ನು ಸಮಿತಿ ಸದಸ್ಯರು ಕೋರಿದರು.
ಈ ಸಂದರ್ಭದಲ್ಲಿ ಸಮಿತಿ ಪದಾಧಿಕಾರಿಗಳು, ಊರುವರು, ಉಪಸ್ಥಿತರಿದ್ದರು.











